ಕಲಬುರಗಿ: ಕೆಎಟಿಯಲ್ಲಿ ಸುತ್ತೋಲೆ ರದ್ದತಿಯಿಂದ 371ನೇ ಜೇ ಕಲಂ ಅಡಿ ಆಯ್ಕೆಯಾದ ನೂರಾರು ಎಇ,ಜೆಇ ಅಭ್ಯರ್ಥಿಗಳ ಜ್ವಲಂತ ಸಮಸ್ಯೆಯ ಬಗ್ಗೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ನೇತೃತ್ವದ ನೂರಾರು ಫಲಾನುಭವಿ ಅಭ್ಯರ್ಥಿಗಳ ನಿಯೋಗಕ್ಕೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ನೈರ್ಮಲೀಕಣ ಇಲಾಖೆಯಡಿ ಕೆಪಿಎಸ್ಸಿಯಿಂದ ನಡೆದ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕದ ನೂರಾರು ಅಭ್ಯರ್ಥಿಗಳು ಎಇ,ಜೆಇ ಹುದ್ದೆಗಳಿಗೆ ಆಯ್ಕೆಯಾಗಿದ್ದರು. ನೇಮಕಾತಿ ಸುತ್ತೋಲೆಯಲ್ಲಿಯ ಲೋಪದಿಂದ ಕಲ್ಯಾಣ ಕರ್ನಾಟಕದಿಂದ ಆಯ್ಕೆಯಾದ ನೂರಾರು ಅಭ್ಯರ್ಥಿಗಳು ತಮ್ಮ ಹುದ್ದೆಗಳು ಕಳೆದುಕೊಳ್ಳುವ ಸ್ಥಿತಿ ಏರ್ಪಟ್ಟಿತು.
ಎತನ್ಮದ್ಯೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಎಚ್ಚೆತ್ತು ಕೊಂಡು ಫಲಾನುಭವಿಗಳ ಮನವಿಗೆ ಸ್ಪಂದಿಸಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರ ನೇತೃತ್ವದಲ್ಲಿ ಫಲಾನುಭವಿ ಅಭ್ಯರ್ಥಿಗಳ ಸಭೆ ನಡೆಸಿ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡಲು ಹೋರಾಟದ ರೂಪುರೇಷೆಗಳನ್ನು ಹಮ್ಮಿಕೊಂಡಿರುವಂತೆ, ಮೊದಲನೇ ಹಂತವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆರವರ ಕಛೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಯಿತು.
ಅದರಂತೆ 371ನೇ ಜೇ ಕಲಂ ತಿದ್ದುಪಡಿಯ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರವರ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ವಿವರವಾಗಿ ಚರ್ಚಿಸಿ ಮನವಿ ಪತ್ರ ಸಲ್ಲಿಸಲಾಯಿತು.ಇದಕ್ಕೆ ತಕ್ಷಣ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಾಲಮಿತಿಯಲ್ಲಿ ಮತ್ತು ಸಮಾರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಆದೇಶ ನೀಡಿದರು ಹಾಗೂ ಈ ವಿಷಯಕ್ಕೆ ನ್ಯಾಯ ದೊರಕಿಸಿಕೊಡುವ ಬಗ್ಗೆ ಬಲವಾದ ಭರವಸೆ ನೀಡಿದರು.
ನಿಯೋಗದಲ್ಲಿ ಫಲಾನುಭವಿ ಅಭ್ಯರ್ಥಿಗಳ ಮುಖಂಡರಾದ ವಿನೋದಕುಮಾರ,ದಾವಲ್ ಅರ್ಜುಣಗಿ, ಸುನೀಲ್ ಕುಮಾರ,ಅಕ್ಷ್ಮೀ, ಅಶ್ವಿನಿ, ಮೆಹಬೂಬ ಸೇರಿದಂತೆ ನೂರಾರು ಜನ ಅಭ್ಯರ್ಥಿಗಳು ಮತ್ತು ಸಮಿತಿಯ ಮುಖಂಡರು ಉಪಸ್ಥಿತರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…