ದೇಶದ ಅಭಿವೃದ್ಧಿಗೆ ಕೈಜೋಡಿಸಿ: ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮದಲ್ಲಿ ರಾಜ್ಯಪಾಲರ ಕರೆ

ಬೆಂಗಳೂರು; ನಮ್ಮ ಯುವಕರು ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗಾಗಿ ಮತ್ತು ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಯನ್ನು ಬಲಪಡಿಸುವ ಜೊತೆಗೆ ಪ್ರಮುಖ ಮಾನವ ಸಂಪನ್ಮೂಲಗಳಾಗಿದ್ದಾರೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮದ ಸಮಾರೋಪ ಸಮಾರಂಭ “ವತನ್ ಕೋ ಜಾನೋ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಭಾರತ ಯುವಕರ ದೇಶ. ಭಾರತದ ಜನಸಂಖ್ಯೆಯ ಸುಮಾರು 65 ಪ್ರತಿಶತದಷ್ಟು ಜನರು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಮತ್ತು ಯುವಕರು ದೇಶದ ಭವಿಷ್ಯ ಮತ್ತು ದೇಶದ ಅಭಿವೃದ್ಧಿಯ ಪ್ರಮುಖ ಭಾಗವಾಗಿದ್ದಾರೆ ಎಂದರು.

ಸ್ವಾತಂತ್ರ್ಯದ 75 ವರ್ಷಗಳಲ್ಲಿ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ. ಸ್ವಾವಲಂಬಿ ಭಾರತವನ್ನು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ. 2047 ರವರೆಗಿನ ಸ್ವಾತಂತ್ರ್ಯದ ಶತಮಾನವು ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಮತ್ತು ನಮ್ಮ ದೇಶವನ್ನು ವಿಶ್ವದ ಅತ್ಯುತ್ತಮ ದೇಶಗಳ ವರ್ಗಕ್ಕೆ ತರುವ ಕರ್ತವ್ಯದ ಅವಧಿಯಾಗಿದೆ. ಈ ಕರ್ತವ್ಯದ ಅವಧಿಯನ್ನು ಅವಕಾಶವನ್ನಾಗಿ ಪರಿವರ್ತಿಸಲು ನಾವು ಪಾಲುದಾರರಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕವು ದೇಶದ ಪ್ರಗತಿಪರ, ಉತ್ತಮವಾಗಿ ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ರಾಜ್ಯವಾಗಿದೆ. ಶಿಕ್ಷಣ, ಆರೋಗ್ಯ, ಕೃಷಿ, ಮಾಹಿತಿ ಮತ್ತು ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಕೈಗಾರಿಕೆ ಮತ್ತು ವಾಣಿಜ್ಯ, ಸ್ಟಾರ್ಟ್‍ಅಪ್‍ಗಳು, ಏರೋಸ್ಪೇಸ್, ಕೃತಕ ಬುದ್ಧಿಮತ್ತೆ, ಇಂಧನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರ್ನಾಟಕ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಶ್ಲಾಘಿಸಿದರು.

ಕಾಶ್ಮೀರ ರಾಜ್ಯವು ನೈಸರ್ಗಿಕ ಸೌಂದರ್ಯ ತುಂಬಿದ ರಾಜ್ಯವಾಗಿದೆ. ಅದರ ವಿಶಿಷ್ಟ ಸಂಸ್ಕøತಿ ಮತ್ತು ಮಾತಾ ವೈμÉ್ಣೂೀ ದೇವಿ ಮತ್ತು ಬಾಬಾ ಅಮರನಾಥರ ಗುಹೆಗಳಿಗೆ ದೇಶ ಮತ್ತು ಪ್ರಪಂಚದಲ್ಲಿ ಪ್ರಸಿದ್ಧವಾಗಿದೆ. ಭೂಮಿಯ ಮೇಲೆ ಎಲ್ಲಿಯಾದರೂ ಸ್ವರ್ಗವಿದ್ದರೆ ಅದು ಕಾಶ್ಮೀರದಲ್ಲಿದೆ ಎಂದು ಹೇಳಲಾಗುತ್ತದೆ. “ಕಾಶ್ಮೀರ ಯುವ ವಿನಿಮಯ” ಕಾರ್ಯಕ್ರಮದ ಮೂಲಕ, ನಮ್ಮ ಕಾಶ್ಮೀರಿ ಯುವಕರು ನಮ್ಮ ದೇಶದ ಅನನ್ಯ ಗುರುತು, ವೈವಿಧ್ಯತೆಯಲ್ಲಿ ಏಕತೆಯ ಪರಿಕಲ್ಪನೆಯನ್ನು ತಿಳಿದುಕೊಳ್ಳಲು ಮತ್ತು ಭಾರತದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಮತ್ತು ಪರಸ್ಪರರ ಸಾಮಾಜಿಕ ಏಕೀಕರಣವನ್ನು ತಿಳಿದುಕೊಳ್ಳಲು ಅವಕಾಶವನ್ನು ಪಡೆಯುತ್ತಿದ್ದಾರೆ. ರಾಜ್ಯ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದರು.

ಡಿಸೆಂಬರ್ 25 ರಿಂದ 31ನೇ ಡಿಸೆಂಬರ್ ವರೆಗೆ ಕೊಡಗು ಜಿಲ್ಲಾ ಯುವಜನ ಸಂಘ.ಮತ್ತು ಕೂರ್ಗ್ ಪಬ್ಲಿಕ್ ಸ್ಕೂಲ್ ಮತ್ತು ಗೋಣಿಕೊಪ್ಪಲಿನ ಪೂರ್ವ ವಿಶ್ವವಿದ್ಯಾಲಯದ ಕಾಲೇಜು ಸಹಯೋಗದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಗೃಹ ಸಚಿವಾಲಯದ ಮಾರ್ಗದರ್ಶನದಲ್ಲಿ ನೆಹರು ಯುವ ಕೇಂದ್ರ ಸಂಘಟನೆ ಕರ್ನಾಟಕದಿಂದ ಕರ್ನಾಟಕದ ಕೂರ್ಗ್‍ನಲ್ಲಿ “ಕಾಶ್ಮೀರ ಯುವ ವಿನಿಮಯ ಕಾರ್ಯಕ್ರಮ” ಆಯೋಜಿಸುತ್ತಿರುವುದು ಸಂತೋಷದ ವಿಷಯ.

ಈ ಕಾರ್ಯಕ್ರಮದಲ್ಲಿ, ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಜೊತೆಗೆ ಯೋಗ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ವ್ಯಾಪಾರ ಮತ್ತು ಹೊಸ ತಂತ್ರಜ್ಞಾನದ ಬಗ್ಗೆ ಮಾಹಿತಿಯ ಜೊತೆಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡೆಸಿರುವುದು ಶ್ಲಾಘನೀಯ. ಇದರೊಂದಿಗೆ ಕರ್ನಾಟಕದ ಭಾμÉ, ಸಂಪ್ರದಾಯ, ಸಂಸ್ಕೃತಿ, ವೇಷಭೂಷಣ ಮತ್ತು ಇತರ ಅಂಶಗಳನ್ನು ತಿಳಿದುಕೊಳ್ಳುವ ಅವಕಾಶವನ್ನು ಕಾಶ್ಮೀರದ ಜನತೆಯು ಪಡೆದಿದ್ದಾರೆ ಎಂದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಶಾಸಕರಾ ಕಾನೂನು ಎ.ಎಸ್. ಪೆÇನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಎಂ.ಎನ್.ನಟರಾಜ್, ನೆಹರು ಯುವ ಕೇಂದ್ರ ಸಂಘಟನೆಯ ಪ್ರಾದೇಶಿಕ ನಿರ್ದೇಶಕ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

55 mins ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

1 hour ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

15 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

15 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

15 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420