`ಹೃದಯ ವೀಣೆ’ ಚೊಚ್ಚಲ ಕವನ ಸಂಕಲನ ಬಿಡುಗಡೆ

ಕಲಬುರಗಿ: ಸಮಾಜ ಸ್ಪಂದಿಸುವ ನಿಟ್ಟಿನಲ್ಲಿ ಕವಿಗಳು ತನ್ನ ಕಾವ್ಯ ಹೊರಹಾಕಬೇಕು.ಒಟ್ಟಾರೆಯಾಗಿ ಸಾಮಾಜಿಕ ಪರಿವರ್ತನೆ ಒಬ್ಬ ಲೇಖಕನ ಮೂಲ ಉದ್ದೇಶವಾಗಿರಬೇಕು. ಲೇಖಕಿ ಕವಿತಾ ಪಿ ಮೋರಾ ಅವರು ತಮ್ಮ ಶಿಕ್ಷಕ ವೃತ್ತಿಯ ಜತೆಗೆ ಕವನಗಳು ರಚಿಸಿ ಸಮಾಜ ತಿದ್ದುವ ಕೆಲಸ ಮಾಡುತ್ತಿದ್ದಾರೆ. ಮತ್ತು ಸಂಬಂಧಗಳಲ್ಲಿ ಬಿರುಕುಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಸಂಬಂಧಗಳು ಬೆಸೆಯುವ ಸೂಜಿಯಾಗಿ ಇಂದಿನ ಕವಿಗಳು ಕಾರ್ಯ ಮಾಡಬೇಕಾಗಿದೆ ಎಂದು ಶಾಸಕ ಅಲ್ಲಮಪ್ರಬು ಪಾಟೀಲ ನೆಲೋಗಿ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಡಗಂಚಿಯ ಅಮರ್ಜಾ ಪ್ರಕಾಶನದ ಜಂಟಿ ಆಶ್ರಯದಲ್ಲಿ ರವಿವಾರ ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ – ಲೇಖಕಿ ಕವಿತಾ ಪಿ ಮೋರಾ ಅವರ ವಿರಚಿತ `ಹೃದಯ ವೀಣೆ’ ಎಂಬ ಚೊಚ್ಚಲ ಕವನ ಸಂಕಲನವನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕೃತಿ ಪರಿಚಯಿಸಿದ ಹಿರಿಯ ಸಾಹಿತಿ-ಪತ್ರಕರ್ತ ಧರ್ಮಣ್ಣಾ ಹೆಚ್. ಧನ್ನಿ, ವೃತ್ತಿ ಮತ್ತು ಪ್ರವೃತ್ತಿಗಳು ಜೊತೆಯಾದಾಗ ಹೊಸ ಸೃಜನಶೀಲ ಕಾರ್ಯ ಹೊರಬರಲು ಸಾಧ್ಯ. ಈ ನಿಟ್ಟಿನಲ್ಲಿ ಹೃದಯ ವೀಣೆ ಕವನ ಸಂಕಲನವೇ ಸಾಕ್ಷಿ. ಕನ್ನಡ ಸಾರಸ್ವತ ಲೋಕ್ಕೆ ಈ ಕೃತಿ ತನ್ನದೇ ಮೌಲ್ಯದಿಂದ ಕೂಡಿದೆ. ಕವಿಯ ಮನದೊಳಗೆ ಹುದುಗಿದ ವಿಚಾರಗಳು ಅಕ್ಷರ ರೂಪದಲ್ಲಿ ಅಭಿವ್ಯಕ್ತಿಗೊಳಿಸಿದಾಗ ಉತ್ತಮ ಕೃತಿ ಹೊರ ಬರಲು ಸಾಧ್ಯ ಎಂದು ಮಾರ್ಮಿಕವಾಗಿ ಹೇಳಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ಸಾರಸ್ವತ ಲೋಕಕ್ಕೆ ಹೊರಬರುತ್ತಿರುವ ಲೇಖಕ ರಚಿಸಿದ ಕವನಗಳು ಇಂದಿನ ಸಮಾಜದ ಪರಿವರ್ತನೆಗೆ ಪೂರಕವಾಗಿರಬೇಕು. ಮತ್ತು ಮೌಲ್ಯಗಳನ್ನು ತುಂಬಿದ್ದಾಗಿರಬೇಕು. ಇವತ್ತಿನ ದಿವಸ ಕಲುಷಿತಗೊಂಡ ಸಮಾಜವನ್ನು ಶುದ್ಧೀಕರಿಸುವಂಥ ಕಾವ್ಯ ಹೊರಬರಬೇಕಾಗಿದೆ. ಅಂದಾಗ ಮಾತ್ರ ಸಮಾಜದಲ್ಲಿ ತಮ್ಮ ಕವನಗಳಿಗೆ ವಿಶೇಷ ಮಹತ್ವ ಬರಲು ಸಾಧ್ಯ ಎಂದು ಹೇಳಿದರು.

ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರ ಓಕಳಿ ಮಾತನಾಡಿ, ಸೃಜನಶೀಲ ಬರಹದಿಂದ ಸಮಾಜ ಪರಿವರ್ತನೆ ಸಾಧ್ಯ. ಜೀವನ ಯಶಸ್ಸಿಗೆ ಕವಿ ಮನಸ್ಸು ತುಡಿತದಿಂದ ಕೂಡಿರುತ್ತದೆ ಎಂದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕಮಲಾಪೂರ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರ ಓಕಳಿ, ಉತ್ತರ ವಲಯ ಬಿಇಓ ಸೋಮಶೇಖರ ಹಂಚನಾಳ, ಲೇಖಕಿ ಕವಿತಾ ಪಿ ಮೋರಾ ಮಾತನಾಡಿದರು.

ಪ್ರಮುಖರಾದ ಶಾಮರಾವ ಸೂರನ್, ಯಶ್ವಂತರಾಯ ಅಷ್ಠಗಿ, ಶರಣರಾಜ್ ಛಪ್ಪರಬಂದಿ, ಶ್ರೀಕಾಂತ ಪಾಟೀಲ ತಿಳಗೂಳ, ಮಂಜುನಾಥ ಕಂಬಾಳಿಮಠ, ಡಾ. ಶರಣಬಸಪ್ಪ ವಡ್ಡನಕೇರಿ, ಕಸ್ತೂರಿಬಾಯಿ ರಾಜೇಶ್ವರ, ವಿಶಾಲಾಕ್ಷಿ ಮಾಯಾಣ್ಣವರ್, ಹೆಚ್. ಎಸ್ ಬರಗಾಲಿ, ಸಿದ್ಧರಾಮ ಸರಸಂಬಿ, ರಾಜೇಂದ್ರ ಮಾಡಬೂಳ, ವಿಶ್ವನಾಥ ತೊಟ್ನಳ್ಳಿ, ಮಹಾಂತೇಶ ಪಾಟೀಲ, ಶಿವಕುಮಾರ ಸಿ.ಹೆಚ್., ನರಸಪ್ಪಾ ಬಾವಗಿ, ಶಿವಾನಂದ ಪೂಜಾರಿ, ಗಂಗಮ್ಮ ನಾಲವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಸಾಮಾಜಿಕ ನ್ಯಾಯದ ಹೆಸರ್ಹೇಳೀ ಅಧಿಕಾರಕ್ಕೆ ಬಂದ ಸರ್ಕಾರದಿಂದಲೇ ಮೋಸ

ವಾಡಿ: ಸಾಮಾಜಿಕ ನ್ಯಾಯದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದ ಸರ್ಕಾರಗಳು ಸಹ ಮತ ಹಾಕಿದ ನಮ್ಮನ್ನೇ ನಿರಂತರವಾಗಿ ಮೋಸ ಮಾಡುತ್ತಿರುವುದು…

6 mins ago

ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾಶಾಖೆಯಿಂದ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಫಾರ್ಮಸಿಸ್ಟ್…

24 mins ago

ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಜಾಲನೆ

ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು…

25 mins ago

ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ…

29 mins ago

SSLC/PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ರಾಮಮಂದಿರ ಹಿಂದುಗಡೆ ಇರುವ ಸಮಾಜ ಭವನದಲ್ಲಿ ಶ್ರೀ ಶಿವಶರಣ ಹರಳಯ್ಯ (ಸಮಗಾರ) ಮಚಗಾರ ಸಮಾಜದ  ವತಿಯಿಂದ ಎಸ್‍ಎಸ್‍ಎಲ್‍ಸಿ…

30 mins ago

ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ

ಕಲಬರುಗಿ: ನಗರದ ಚವದಾಪೂರಿ ಮಠದ ಶತಾಯುಶಿ. ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ ಜರುಗಿತು. ಈ…

33 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420