ಸುರಪುರ: ನಗರದ ತಾಲೂಕು ಪಂಚಾಯತಿಯ ಸಾಮಥ್ರ್ಯ ಸೌಧದಲ್ಲಿ ಜಿ.ಪಂ ಯಾದಗಿರಿ, ತಾ.ಪಂ ಸುರಪುರ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಗ್ರಾ.ಪಂ ಕೂಸಿನ ಮನೆಗಳ ಶಿಶು ಆರೈಕೆದಾರರಿಗಾಗಿ ಹಮ್ಮಿಕೊಂಡ ತರಬೇತಿ ಕಾರ್ಯಗಾರವನ್ನು ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಸಜ್ಜನ ರವರು ಸಸಿಗೆ ನೀರುಣ್ಣಿಸುವ ಮೂಲಕ ಚಾಲನೆ ನೀಡಿದರು.
ನಂತರ ತರಬೇತಿ ಕಾರ್ಯಾಗಾರದಲ್ಲಿ ಶಿಶು ಆರೈಕೆದಾರರಿಗೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕೇಕ್ ಕತ್ತರಿಸುವ ಮೂಲಕ ಹೊಸ ವರ್ಷದ ಶುಭಾಶಯಗಳು ತಿಳಿಸಿದರು,ಈ ಸಂದರ್ಭದಲ್ಲಿ ಇಓ ಬಸವರಾಜ ಸಜ್ಜನ್ ಮಾತನಾಡಿ,ಸರಕಾರ ಕೂಸಿನ ಮನೆ ಯೋಜನೆಯನ್ನು ಜಾರಿಗೊಳಿಸಿದ್ದು,ಇದನ್ನು ತುಂಬಾ ಮುತುವರ್ಜಿಯಿಂದ ನಿರ್ವಹಿಸಬೇಕಿದೆ,ತರಬೇತಿಯಲ್ಲಿ ಎಲ್ಲಾ ಆರೈಕೆದಾರರು ತಮಗೆ ತಿಳಿಸುವ ಚಟುವಟಿಕೆಗಳನ್ನು ಸರಿಯಾಗಿ ಅರಿತುಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸುರಪುರ ತಾಪಂ ಮಾನ್ಯ ಸಹಾಯಕ ನಿರ್ದೇಶಕರಾದ ರವಿಚಂದ್ರ ರಡ್ಡಿ, ಮಾಸ್ಟರ್ ಟ್ರೇನರ್ ಚಿದಾನಂದ ಸ್ವಾಮಿ, ವಿಜಯಲಕ್ಷ್ಮೀ, ಸಂಗಮ್ಮ,ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಮಹಿಳಾ ಮೇಲ್ವಿಚಾರಕಿ ಸಾವಿತ್ರಿ ಗಾಳಿ ಸೇರಿದಂತೆ ಸುರಪುರ ಹಾಗೂ ಹುಣಸಗಿ ತಾ.ಪಂ ವ್ಯಾಪ್ತಿಯ ಗ್ರಾ.ಪಂ ಗಳ ಕೂಸಿನ ಮನೆಗಳ ಶಿಶು ಆರೈಕೆದಾರರು ಭಾಗವಹಿಸಿದ್ದರು.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…