ಕನ್ನಡ ಹೋರಾಟಗಾರರ ಬಿಡುಗಡೆ ಮಾಡದಿದ್ದರೆ ಉಗ್ರ ಹೋರಾಟ; ನಿಂಗಪ್ಪ ನಾಯಕ

0
9

ಸುರಪುರ: ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಹೋರಾಟ ಮಾಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ ಅನೇಕ ಜನ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣಕುಮಾರ ಶೆಟ್ಟಿಯವರ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ತಾಲೂಕು ಅಧ್ಯಕ್ಷ ನಿಂಗಪ್ಪ ನಾಯಕ ಬಿಜಾಸಪುರ ತಿಳಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ರಾಜ್ಯದಲ್ಲಿನ ಎಲ್ಲಾ ನಾಮಫಲಕಗಳು ಶೇ 60 ರಷ್ಟು ಕನ್ನಡದಲ್ಲಿಯೇ ಇರಬೇಕು ಎನ್ನುವ ನಿಯಮವಿದ್ದರು,ಯಾವುದೇ ಅಂಗಡಿ ಮುಂಗಟ್ಟು ವ್ಯಾಪಾರ ವಾಣಿಜ್ಯ ಕೇಂದ್ರಗಳು ಇದನ್ನು ಪಾಲಿಸುತ್ತಿಲ್ಲ. ಸರಕಾರಗಳು ಕಾಟಾಚಾರಕ್ಕೆ ಆಗೊಮ್ಮೆ ಈಗೊಮ್ಮೆ ಕನ್ನಡ ನಾಮಫಲಕ ಹಾಕುವಂತೆ ಹೇಳಿಕೆ ನೀಡಿ ಕೈತೊಳೆದುಕೊಳ್ಳುತ್ತವೆ,ಇದರಿಂದ ರಾಜ್ಯದಲ್ಲಿರುವ ಅನೇಕ ವ್ಯಾಪಾರ ವಾಣಿಜ್ಯ ಕೇಂದ್ರಗಳವರಿಗೆ ಕನ್ನಡ ಕಡ್ಡಾಯ ನಾಮಫಲಕದ ಬಗ್ಗೆ ಕಿಂಚಿತ್ತೂ ಅಭಿಮಾನವಿಲ್ಲ,ಸರಕಾರಕ್ಕೂ ಇದು ಬೇಕಿಲ್ಲ,ಆದರೆ ಸ್ವಾಭಿಮಾನಿ ಕನ್ನಡ ಪರ ಹೋರಾಟಗಾರರು ಪ್ರಶ್ನಿಸಿದರೆ ಅವರ ಮೇಲೆ ಕೇಸ್ ಹಾಕಿ ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತೀರಿ, ನಿಜವಾಗಿಯೂ ಸರಕಾರಗಳಿಗೆ ಕನ್ನಡದ ಬಗ್ಗೆ ಬದ್ಧತೆ ಇದ್ದರೆ ಮೊದಲು ಕನ್ನಡ ನಾಮಫಲಕ ಕಡ್ಡಾಯವಾಗಿ ಹಾಕಲೇಬೇಕು ಎನ್ನುವ ಕಠಿಣ ಕ್ರಮಕ್ಕೆ ಮುಂದಾಗಬೇಕು,ಅದು ಬಿಟ್ಟು ಹೀಗೆ ಹೋರಾಟಗಾರರ ಮೇಲೆ ಕೇಸ್ ಹಾಕುವ ಕೆಲಸಕ್ಕೆ ಮುಂದಾದರೆ ರಾಜ್ಯದಲ್ಲಿ ಉಗ್ರ ಪ್ರತಿಭಟನೆ ಸರಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿ,ಕೂಡಲೇ ಈಗ ಬಂಧನಕ್ಕೊಳಪಡಿಸಿರುವ ಟಿ.ಎ ನಾರಾಯಣಗೌಡ ಸೇರಿದಂತೆ ಎಲ್ಲರನ್ನು ಬಿಡುಗಡೆ ಮಾಡಲೆಬೇಕು ಎಂದು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here