ಕಾಂಗ್ರೆಸ್ ವಿರುದ್ಧ ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ

0
19

ಕಲಬುರಗಿ: ದೇಶದ ಜನರ 5 ದಶಕಗಳ ಕನಸು ನನಸಾಗುತ್ತಿರುವ ಪವಿತ್ರ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಭಾಗಿಯಾಗಿದ್ದ, 31 ವರ್ಷದ ಹಳೆಯ ಪ್ರಕರಣಗಳನ್ನು ಕೆದಕಿ ಶ್ರೀಕಾಂತ್ ಪೂಜಾರಿ ಸೇರಿದಂತೆ ರಾಮ ಭಕ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿಗಳ ಎದುರುಗಡೆ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ಮಾಜಿ ವಿಧಾನ ಪರಿಷತ್ ಸದ್ಯಸರಾದ ಅಮರಾನಾಥ್ ಪಾಟೀಲ್, ರಾಜ್ಯ ಕಾರ್ಯದರ್ಶಿ ಮತ್ತು ಶಾಸಕ ಬಸವರಾಜ್ ಮತ್ತಿಮೂಡ, ಹಿರಿಯರಾದ ಸುನಿಲ್ ವಲ್ಲಾಪುರೇ, ಶಶಿಲ್ ನಮೋಷಿ, ಅಂಬಾರಾಯ ಅಷ್ಟಗಿ, ಗಿರಿರಾಜ್ ಯಲಮೇಲಿ, ಅಶೋಕ್ ಬಗಲಿ, ರಾಜೂಗೌಡ ನಾಗನಹಳ್ಳಿ, ,,ಅರುಣಕುಮಾರ್ ಪಾಟೀಲ್ , ರಾಜಕುಮಾರ್ ಕೋಟೆ, ಯುವ ಮುಖಂಡರಾದ್ ಆನಂದ ಕಣಸೂರ, ರಮೇಶ ಬೇಳಕೆರಿ ಸೇರಿದಂತೆ ಪದಾಧಿಕಾರಿಗಳು, ಮುಖಂಡರು, ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಶ್ರೀರಾಮ ಭಕ್ತರು ಭಾಗವಹಿಸಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here