ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

0
10

ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ತೀರ್ಮಾನಿಸಲಾಯಿತು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃμÁ್ಣದಲ್ಲಿ ಇಂದು ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿ, ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ 29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಚಿತ್ರೋತ್ಸವವು ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾμÁ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಹಾಗೂ ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ರಾಜ್ಯಪಾಲರು ಪ್ರಶಸ್ತಿಗಳನ್ನು ಮಾಡಲಿರುವರು ಎಂದು ತಿಳಿಸಿದರು.

Contact Your\'s Advertisement; 9902492681

ಸಂಘಟನಾ ಸಮಿತಿ ಸಭೆಯ ಜೊತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ. ಕೋಮುವಾದದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹಿಂದೆ ವಿಧಾನಸೌಧದ ಮುಂಭಾಗದಲ್ಲಿಯೇ ಅಂತರರಾಷ್ಟ್ರಿಯ ಚಲನಚಿತ್ರೋತ್ಸವದ ಉದ್ಘಾಟನೆಯಾಗುತ್ತಿತ್ತು. ದೇಶವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಬಾರಿಯೂ ಅಂತರರಾಷ್ಟ್ರಿಯ ಚಲನಚಿತ್ರೋತ್ಸವವು ಯಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಸಂಘಟನಾ ಸಮಿತಿ ಸಭೆಯ ಮುಖ್ಯಾಂಶಗಳು: ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ಇಂದು ನಡೆಸಲಾಗಿದೆ. ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದೆ. ಬೆಲ್ಜಿಯಂನ ಅಂತರರಾಷ್ಟ್ರೀಯ ಚಿತ್ರ ನಿರ್ಮಾಪಕರ ಸಂಘಗಳ ಒಕ್ಕೂಟವಾದ ಈIಂPಈ ನ ಮಾನ್ಯತೆಯನ್ನು ಸಹ ಪಡೆದುಕೊಂಡಿದೆ.

15 ನೇ ಚಲನಚಿತ್ರೋತ್ಸವವನ್ನು ಫೆಬ್ರುವರಿ 29 ರಿಂದ ಮಾರ್ಚ್ 7 ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷವೂ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಚಿತ್ರೋತ್ಸವವನ್ನು ಏರ್ಪಡಿಸುತ್ತಿದ್ದು, ಈ ಬಾರಿಯೂ ಫೆಬ್ರವರಿ / ಮಾರ್ಚ್ ತಿಂಗಳಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಏರ್ಪಡಿಸಲು ತಾತ್ಕಾಲಿಕ ದಿನಾಂಕಗಳ ವೇಳಾಪಟ್ಟಿ ಮಾಡಿಕೊಳ್ಳಲಾಗಿದೆ.

ಫೆಬ್ರವರಿ 29 ರಂದು ಗುರುವಾರ ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 01 ರಿಂದ 07 ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ ನಡೆಯಲಿದ್ದು, ಮಾರ್ಚ್ 07 ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಲಿದ್ದು, ರಾಜ್ಯಪಾಲರು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.

ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಯಿತು. ಲೀಲಾವತಿ, ಭಗವಾನ್ ಮತ್ತು ಸಿ.ವಿ. ಶಿವಶಂಕರ್ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

ಈ ನಿಟ್ಟಿನಲ್ಲಿ ಸರ್ಕಾರವು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿಯನ್ನು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನ್ನು ದಿನಾಂಕ : 30.12.2023 ರಂದು ರಚಿಸಿ ಆದೇಶ ಹೊರಡಿಸಿದೆ.

ಅದರನ್ವಯ ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್‍ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here