ಕಲಬುರಗಿ: ಕಳೆದ ತಿಂಗಳಾಂತ್ಯದಲ್ಲಿ ರಾಜ್ಯದಾದ್ಯಂತ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಏರ್ಪಡಿಸಿದ್ದ ʼಗೃಹಲಕ್ಷ್ಮಿʼ ಯೋಜನೆಗೆ ಸಂಬಂಧಿಸಿದ ದಾಖಲಾತಿಗಳ ಪರಿಶೀಲನೆ ಶಿಬಿರದಲ್ಲಿ ಸುಮಾರು 4 ಲಕ್ಷ ಗ್ರಾಮೀಣ ಮಹಿಳೆಯರು ಆಧಾರ್ ಕಾರ್ಡ್ ಪುನರ್ಪರಿಶೀಲನೆ ಹಾಗೂ ಹೊಸದಾಗಿ ಅಂಚೆ ಕಚೇರಿಯ ಐಪಿಪಿಬಿ ಖಾತೆಗಳನ್ನು ಆರಂಭಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ರಾಜ್ಯದ 3,48,386 ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಂಡು ತಮ್ಮ ಆಧಾರ್ ಕಾರ್ಡ್ಗಳನ್ನು ಪುನರ್ ಪರಿಶೀಲನೆಗೆ ಒಳಪಡಿಸಿದರು. ಮೊದಲ ದಿನ 91,681 ಮಂದಿ, ಎರಡನೆಯ ದಿನ 1,31,638 ಮಂದಿ ಹಾಗೂ ಮೂರನೆಯ ದಿನ 1,25,067 ಮಂದಿ ಮಹಿಳೆಯರು ರಾಜ್ಯದ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ನಡೆದ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಆಧಾರ್ ಕಾರ್ಡ್ಗಳನ್ನು ಪರಿಶೀಲನೆಗೆ ಒಳಪಡಿಸಿದರು. ಇದೇ ಅವಧಿಯಲ್ಲಿ 32,201 ಮಂದಿ ಮಹಿಳೆಯರು ಶಿಬಿರಗಳಲ್ಲಿ ಪಾಲ್ಗೊಂಡು ಹೊಸದಾಗಿ ಅಂಛೆ ಕಚೇರಿಯ ಐಪಿಪಿಬಿ ಖಾತೆಗಳನ್ನು ಆರಂಭಿಸಿದರು ಎಂದು ಹೇಳಿದ್ದಾರೆ.
ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಪುನರ್ ಪರಿಶೀಲನೆಗೆ ಒಳಪಟ್ಟ ಆಧಾರ್ ಕಾರ್ಡ್ ಹಾಗೂ ಹೊಸ ಅಂಛೆ ಕಚೇರಿ ಖಾತೆಗಳನ್ನು ಆಧರಿಸಿ ಅರ್ಜಿಗಳನ್ನು ಪರಿಶೀಲಿಸುತ್ತಿದೆ ಎಂದೂ ಸಚಿವರು ಹೇಳಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…