ಬಿಸಿ ಬಿಸಿ ಸುದ್ದಿ

ಸ್ವಯಂ ಸೇವಾ ಮನೋಭಾವನೆಯಿಂದ ಉತ್ತಮ ಸಮಾಜ ನಿರ್ಮಾಣ

ಕಲಬುರಗಿ: ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಶ್ರೀ ಭೋಜಲಿಂಗೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಾಲಾ ಮಕ್ಕಳಿಗೆ ಉಚಿತ ಕ್ಷೌರ ಸೇವೆ ದೇಶ, ಸಮಾಜ ನಮಗೇನು ನೀಡಿದೆ ಎಂದು ಪ್ರಶ್ನಿಸಿದರು, ದೇಶ, ಸಮಾಜಕ್ಕೆ ನಾವೇನು ??ಮಾಡಿದ್ದೇವೆ ಎಂಬುದು ಪ್ರಮುಖವಾಗಿದೆ. ಯಾವದೇ ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಜೀವನಕ್ಕಾಗಿ ಮೀಸಲಾದರೆ ಯಾವುದೇ ಪ್ರಯೋಜನವಿಲ್ಲ.

ವೃತ್ತಿಯ ಜೊತೆಗೆ ಸಮಾಜ ಸೇವೆಯು ಮುಖ್ಯ. ಸೇವೆಯು ನಮ್ಮನ್ನು ಸದಾ ಕಾಪಾಡುತ್ತದೆ. ವೈಯಕ್ತಿಕ ಜೀವನದ ಜೊತೆಗೆ ಸಮಾಜದ ಒಳಿತಿಗಾಗಿ ತನ್ನಿಂದಾದ ಏನಾದರು ಒಳಿತು ಮಾಡುವುದು, ಸ್ವಯಂ ಸೇವೆ ಸಲ್ಲಿಸುವ ಮನೋಭಾವನೆಯಿಂದ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಈಗಾಗಲೇ ಅನೇಕ ಕಡೆಯಲ್ಲೂ ಈ ಉಚಿತ ಕ್ಷೌರ ಸೇವೆ ಇಲ್ಲಿಯವರೆಗೆ 1285ಕ್ಕೊ ಹೆಚ್ಚು ಅನಾಥರಿಗೆ ನಿರ್ಗತಿಕರಿಗೆ. ಅನಾಥಾಶ್ರಮದಲ್ಲಿ ಬುದ್ದಿ ಮಾದ್ಯರಿಗೆ. ಪೌರಕಾರ್ಮಿಕರಿಗೆ, ಅನಾಥ ಮಕ್ಕಳಿಗೆ. ಅಂಧರಿಗೆ. ಅಂಗವಿಕಲರಿಗೆ. ಹಿರಿಯ ವೃದ್ದರಿಗೆ. ಕಟ್ಟಡ ಕಾರ್ಮಿಕರಿಗೆ. ಮೂಕರಿಗೆ. ಹಾಗೂ ಶಾಲಾ ಮಕ್ಕಳಿಗೆ ಈ ಸೇವೆ ಸಲ್ಲಿಸಿದ್ದೇವೆ ಎಂದು ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಸೇವಕ ಡಾ.ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಹೇಳಿದರು.

ಶ್ರೀ ಭೋಜಲಿಂಗೇಶ್ವರರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಕೇಂದ್ರದಲ್ಲಿ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜ ಸೇವಾ ಸಂಘದ ವತಿಯಿಂದ ಶ್ರೀ ಭೋಜಲಿಂಗೇಶ್ವರರ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಹಿರಗಪ್ಪ ತಾತ ನವರ ಸುಪುತ್ರರಾದ ಪರಮ ಪೂಜ್ಯ ಶ್ರೀ ಡಾ. ಕುಮಾರ್ ಭೋಜರಾಜನ 28 ನೇ ವರ್ಷದ ಜನ್ಮ ದಿನದ ನಿಮಿತ್ತ ವಾಗಿ ಶ್ರೀ ಭೋಜಲಿಂಗೇಶ್ವರರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ 106 ಕ್ಕೊ ಹೆಚ್ಚು ಶಾಲಾ ಮಕ್ಕಳಿಗೆ ಉಚಿತ ಕ್ಷೌರ ಸೇವೆ ಏರ್ಪಡಿಸಿದ್ದರು. “ಜನ್ಮ ದಿನದ ಆಚರಣೆ ಸಂಧರ್ಭದಲ್ಲಿ’ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಸಂಘಟನಾ ಕಾರ್ಯದರ್ಶಿ ಬಸವರಾಜ ಹಳ್ಳಿ ಅವರು ಯಾರು ಸಮಾಜದ ಹಿತಕ್ಕಾಗಿ ಶ್ರಮಿಸುತ್ತಾರೆಯೋ, ಅಂತಹ ಸಮಾಜ ಸೇವಕ ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಗೇ ಪೆÇ್ರೀತ್ಸಾಹ ನೀಡಿದರೆ ಹೆಚ್ಚಿನ ಮಟ್ಟದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಸಕಲರಿಗೊ ಲೇಸನ್ನೇ ಬಯಸಿದಾಗ ನಮ್ಮ ಜೀವನ ಸಾರ್ಥಕವೆನಿಸಿಕೊಳ್ಳುತ್ತದೆ ಎಂದು ಕಲಬುರಗಿ ಜಿಲ್ಲೆಯ ಗೌರವಾಧ್ಯಕ್ಷ ಬಸವರಾಜ ಹಡಪದ ಸುಗೂರ ಎನ್ ಅವರು ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಸೇವೆ ಕಳೆದ ಆರು ವರ್ಷಗಳಿಂದ ನಿರಂತರವಾಗಿ ಶರಣರ ಹೆಸರಿನಲ್ಲಿ ಈ ರೀತಿಯ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಸಮಾಜದ ಸಂಘಟನೆಯ ಜೊತೆ ಜೊತೆಗೆ ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಘಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಗುರು ಶರಣ ಬಸಪ್ಪ ಕುಂಬಾರ ಡೋಣಗಾಂವ್, ಪ್ರಮುಖರಾದ ನಾಗೇಶ, ಶಿಕ್ಷಕ ಪಂಚಾಳ, ಕಾಳಿದಾಸ್ ಶಿಕ್ಷಕ, ಬಸವರಾಜ ಕುಂಬಾರ ಶಿಕ್ಷಕರು, ಸಿಂಧು ಮೇಡಂ ಕುರಾಳ, ಹಾಗೂ ಸಮಾಜದ ಗಣ್ಯರು ಶಹಾಬಾದ ತಾಲೂಕಿನ ಪ್ರಧಾನ ಕಾರ್ಯದರ್ಶಿ ಸಿದ್ರಾಮ ಹಡಪದ ಯಾಗಾಪೂರ, ಶಹಾಬಾದ ತಾಲೂಕಿನ ಉಪಾಧ್ಯಕ್ಷ ಶಿವಲಿಂಗ ಹಡಪದ ಸುಗೂರ ಎನ್. ಮತ್ತು ಶಿವಕುಮಾರ್ ಹಡಪದ ಮಾರಡಗಿ ಶಹಾಬಾದ, ಶಹಾಬಾದ ತಾಲೂಕಿನ ಸಂಘಟನಾ ಕಾರ್ಯದರ್ಶಿ ತೋಟೇಂದ್ರ ಶಹಾಬಾದ, ಹಾಗೂ ದತ್ತು ಹಡಪದ ನಾಲವಾರ, ವಿಶ್ವನಾಥ ಹಡಪದ ಸುಗೂರ ಎನ್. ಮತ್ತು ಸಂಗಮೇಶ ಹಡಪದ ಮಾರಡಗಿ ಸೇರಿದಂತೆ ಶ್ರೀ ಭೋಜಲಿಂಗೇಶ್ವರರ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

4 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

6 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

9 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago