ಕಲಬುರಗಿ: ಶ್ರೀಮಾತಾ ಮಾಣಿಕೇಶ್ವರಿ, ಕೋಲಿ, ಕಬ್ಬಲಿಗ (ಗಂಗಾಮತ) ವಧು-ವರರ ರಾಜ್ಯ ಮಟ್ಟದ 8ನೇ ಸಮಾವೇಶ ಜ. 7ರಂದು ನಗರದ ವಿಶ್ವೇಶ್ವರ ಭವನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ವಧು-ವರರ ಮಾಹಿತಿ ಕೇಂದ್ರದ ಜಿಲ್ಲಾಧ್ಯಕ್ಷ ಸೂರ್ಯಕಾಂತ ಬಿ. ಗುಡ್ಡಡಗಿ ತಿಳಿಸಿದರು.
ಈ ಸಮಾವೇಶವನ್ನು ಕಲಬುರಗಿ ಸಿದ್ಧಾರೂಢ ಮಠದ ಬ್ರಹ್ಮಚಾರಿ ಮಹೇರ್ಶವರಜೀ ಉದ್ಘಾಟಿಸಲಿದ್ದು, ವಧು-ವರರ ಮಾಹಿತಿ ಪುಸ್ತಕವನ್ನು ಗುಲ್ಸರಂನ ಮಲ್ಲಣ್ಣಪ್ಪ ಮುತ್ಯಾ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಡಾ. ಮಲ್ಲಿಕಾರ್ಜುನ ಮುಕ್ಕಾ ಆಗಮಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯ ಅತಿಥಿಯಾಗಿ ಪತ್ರಕರ್ತ ಸೂರ್ಯಕಾಂತ ಜಮಾದಾರ, ಶಿವರಾಯ ನಾವದಗಿ, ಮಾಣಿಕೇಶ್ವರಿ ಮಟ್ಟಿ, ಬಾಬು ಪಿ. ಆಮಾದಾರ, ಅಶೋಕ ಚಾಂದಕವಟೆ ಆಗಮಿಸಲಿದ್ದು, ಸೂರ್ಯಕಾಂತ ಗುಡ್ಡಡಗಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಇದೇವೇಳೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ಸಮಾಜದ ಮಕ್ಕಳಿಗೆ ಬಹುಮಾನ ನೀಡಿ ಸತ್ಕರಿಸಲಾಗುವುದು. ಈವರೆಗೆ 342 ವಧು, 134 ವರರರು ತಮ್ಮ ಹೆಸರನ್ನು ಬೋಂದಣಿ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.
ಬಾಬು ತಡಕಲ್, ಸಾಯಬಣ್ಣ ವಡಗೇರಿ, ಭೀಮರಾವ ಐನಾಪುರ, ಬಸವರಾಜ ನಾಟಿಕಾರ ಇತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…