ಕಲಬುರಗಿ: ಕೋಲಿ, ಕಬ್ಬಲಿಗ, ಗಂಗಾಮತ, ಬೆಸ್ತ, ಮೊಗವೀರ, ಅಂಬಿಗ, ಮೀನುಗಾರರ ಸಮುದಾಯಕ್ಕೆ ಸೇರಿದ ಪ್ರಮೋದ ಮಧ್ವರಾಜ್ ಅವರಿಗೆ ಬಿಜೆಪಿ ವತಿಯಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಕರ್ನಾಟಡಕ ರಾಜ್ಯ ಕೋಲಿ ಕಬ್ಬಲಿಗ ಸಮಾಜದ ರಾಜ್ಯಾಧ್ಯಕ್ಷ ಬಸವರಾಜ ಸಪ್ಪನಗೋಳ್ ಆಗ್ರಹಿಸಿದರು.
ರಾಜ್ಯದಲ್ಲಿ 39 ಪರ್ಯಾಯ ಪದಗಳಿಂದ ಕರೆಯಲಾಗುವ ಕೋಲಿ ಕಬ್ಬಲಿಗ ಸಮುದಾಯವು ಸುಮಾರು 60 ಲಕ್ಷದಷ್ಟಿದ್ದು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 2,30,000 ಜನಸಂಖ್ಯೆಯ ನಿರ್ಣಾಯಕ ಮತದಾರರಿದ್ದು, ಮಧ್ವರಾಜ್ ಅವರಿಗೆ ಟಿಕೆಟ್ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಮೋದ ಮಧ್ವರಾಜ್ ಅವರು ಓರ್ವ ಪ್ರಾಮಾಣಿಕ ಹಾಗೂ ಶುದ್ಧಹÀಸ್ತದ ರಾಜಕಾರಣಿಯಾಗಿದ್ದು, ಅವರಿಗೆ ಟಿಕೆಟ್ ನೀಡುವ ಮೂಲಕ ಕೋಲಿ ಕಬ್ಬಲಿಗ ಸಮುದಾಯಕ್ಕೆ ರಾಜ್ಯಕೀಯದಲ್ಲಿ ಹಾಗೂ ಪಕ್ಷದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ತಿಳಿಸಿದರು.
ಭೀಮರಾಯ ಐನಾಪುರ, ಚಂದ್ರಶಾ ಜಮಾದಾರ, ಸೀತಾರಾಮ ಜಮಾದಾರ, ದತ್ತಾತ್ರೇಯ ಜಮಾದಾರ, ಮಹಾರಾಯ ಅಗಸಿ, ಶರಣಪ್ಪ ನಾಟೀಕಾರ ಇತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…