ಬಿಸಿ ಬಿಸಿ ಸುದ್ದಿ

ಮುಖ್ಯಮಂತ್ರಿಯವರ ಸಲಹೆಗಾರರ ಪ್ರವಾಸ

ಕಲಬುರಗಿ; ಮುಖ್ಯಮಂತ್ರಿಯವರ ಸಲಹೆಗಾರರು ಹಾಗೂ ಆಳಂದ ಶಾಸಕರಾದ ಬಿ.ಆರ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜನವರಿ 6 ರಂದು ಶನಿವಾರ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿಗೆ ಆಗಮಿಸುವರು.

ಅಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಕನ್ನಡ ಭವನದ ಸುವರ್ಣ ಸಭಾಭವನದಲ್ಲಿ ಪುಸ್ತಕ ಬಿಡುಗಡೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕಲಬುರಗಿ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ, ಪತ್ರಿಕಾಗೋಷ್ಠಿ ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡುವರು.

ಅಂದು ಮಧ್ಯಾಹ್ನ 4 ಗಂಟೆಗೆ ಆಳಂದ ಜೆ.ಪಿ. ಪ್ರೌಢಶಾಲೆಯಲ್ಲಿ ಆಳಂದ ಮತ್ತು ಮಾದನ ಹಿಪ್ಪರಗಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು.

ರಾತ್ರಿ 8.40 ಗಂಟೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಎದುರುಗಡೆಯಿರುವ ಬೇಗ್ ನ್ಯೂರೋ-ಸೈಕಿಯಾಟ್ರಿ ಆಸ್ಪತ್ರೆ ಮತ್ತು ಡಿ-ಅಡಿಕ್ಷನ್ ಸೆಂಟರ್ (BAIG Neuro-Psychiatry Hospital & De-Addiction centre ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಹಿಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.

emedialine

Recent Posts

ನಿಧನ ವಾರ್ತೆ: ಹಣಮಂತರಾವ್ ನಾಟೀಕಾರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…

2 hours ago

ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…

4 hours ago

ಆಂದೋಲಾ ಸ್ವಾಮೀಜಿಗೆ ಘತ್ತರಗಾ ಗ್ರಾಮಸ್ಥರ ಸವಾಲು

ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ‌ ಕಲಬುರಗಿ…

4 hours ago

ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಧೀಶರ ಧಿಡೀರ್ ಭೇಟಿ; ಪರಿಶೀಲನೆ

ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…

4 hours ago

ರಂಗಭೂಮಿಗೆ ಸಿ.ಜಿ.ಕೆ ಕೊಡುಗೆ ಅಪಾರ; ಸಿಜಿಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…

4 hours ago

ಕನ್ನಡ ಸಾಹಿತ್ಯ ಸಂಘ ಸಾಹಿತಿ ದಿ.ಡಾ.ಕಮಲಾ ಹಂಪನಾಗೆ ಶ್ರದ್ಧಾಂಜಲಿ

ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…

4 hours ago