ಅಫಜಲಪುರ; ಪ್ರಾಥಮಿಕ ಆರೋಗ್ಯ ಕೇಂದ್ರ ಗೊಬ್ಬರ (ಬಿ) ಆನೆಕಾಲು ರೋಗ ನಿವಾರಣೆ ಸುಮಾರು ಸುತ್ತಿನಲ್ಲಿ ಮಾತ್ರೆ ಸೇವಿಸದೆ ಇರುವುದು ಇದಕ್ಕೆ ಕಾರಣವಾಗಿದೆ ಅದಕ್ಕಾಗಿ ಈ ಸುತ್ತಿನಲ್ಲಿ ಈ ಸಲ ಶಾಲೆಗಳಿಂದ ಪ್ರಾರಂಭವಾಗಿ ಮೊದಲು ಶಾಲೆಗಳಲ್ಲಿ ವಿದ್ಯಾರ್ಥಿಗಳು ಸೇವನೆ ಮಾಡಿ ನಂತರ ತಮ್ಮ ಮನೆಯಲ್ಲಿ ಎಲ್ಲಾ ಸದಸ್ಯರಿಗೆ ಯಾವುದೇ ಭಯ ಬೇಡ ಎಂದು ಹೇಳಿ ಎಲ್ಲರೂ ಮಾತ್ರೆ ಸೇವನೆ ಮಾಡಿ ಎಂದು ಆನೆ ಕಾಲು ಮುಕ್ತ ಜಿಲ್ಲೆಗೆ ಕೈಜೋಡಿಸಿ ಎಂದು ಶಾಲಾ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಡಾ. ಅಪರ್ಣ ಭದ್ರ ಶೆಟ್ಟಿ ಕರೆ. ಮನವಿ ಮಾಡಿದರು.
ನಂತರ ವೇದಿಕೆ ಮೇಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಬಳಿ ಮಾತನಾಡಿ ಆನೆಕಾಲು ರೋಗ ಗುಪ್ತಗಾಮಿನ ರೋಗ ವಾಗಿದ್ದು ಅದರ ಇತಿಹಾಸವನ್ನು ತಿಳಿಸಿ ಜನರು ಇದನ್ನು ನಿರ್ಲಕ್ಷಿಸುತ್ತಿರುವುದು ವಿಷಾದನೀಯ. ಆನೆಕಾಲು ರೋಗದ ತಡೆಗೆ ತ್ರಿವಳಿ ಮಾತ್ರಗಳು ಮುದ್ದಾಗಿದ್ದು ಅದನ್ನು ತಪ್ಪದೆ ಸೇವಿಸಿ, ಯಾವುದೇ ಅಡ್ಡ ಪರಿಣಾಮವಿಲ್ಲ. ಸರಕಾರ ಉಚಿತವಾಗಿ ಡಿ.ಇ.ಸಿ, ಅಲ್ಬಂಡ ಜಾಲ, ಐವರ್ ಮೆಟ್ಟಿನ್ ಮಾತ್ರೆಗಳನ್ನು ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಬಂದಾಗ ಸಹಕರಿಸಿ ಊಟದ ಸೇವನೆಯ ನಂತರ ಸೇವಿಸಿ ಆನೆಕಾಲು ರೋಗದಿಂದ ದೂರವಿರಿ ಎಂದು ಪೂರ್ವ ಭಾವಿ ಸಭೆಯಲ್ಲಿ ತಿಳಿಸಿದರು.
ಇದೇ ಸಂದರ್ಭದಲ್ಲಿ 18 ರೊಳಗೆ ಪಾಲಕರ ಸಭೆ ಕರೆದು ತ್ರಿವಳಿ ಮಾತ್ರೆಗಳ ಬಗ್ಗೆ ಮಾಹಿತಿ ನೀಡಲು ತಿಳಿಸಲಾಯಿತು. ಸಭೆಯಲ್ಲಿ ಶಾಲಾ ಮುಖ್ಯ ಗುರುಗಳಾದ ಜಬೇರ್ ಮುಲ್ಲಾ, ಹಾಗೂ ಶಾಲಾ ಶಿಕ್ಷಕ ವೃಂದ, ಉಪ ಕೇಂದ್ರದ ಸಿಬ್ಬಂದಿಗಳಾದ ಲಕ್ಷ್ಮಿಕಾಂತ್ ಲಾಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಶ್ವೇತಾ ಪಾಟೀಲ್ ಸಮುದಾಯ ಆರೋಗ್ಯ ಅಧಿಕಾರಿಗಳು, ಆರ್ .ಕೆ ಎಸ್ ಕೆ ಕೌನ್ಸಲರ್ ಎನ್ ಸುಧಾಕರ್, ಆಶಾ ಕಾರ್ಯಕರ್ತೆ ಮಾಂತಮ್ಮ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…