ಸುರಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ಹಸನಾಪುರ ಸರ್ಕಲ್ ನ ಲಕ್ಷ್ಮಿಪುರದ 4 ಅಂಗನವಾಡಿ ಕೇಂದ್ರಗಳ ಸಹಕಾರದೊಂದಿಗೆ ಮಕ್ಕಳ ಬಾಲ ಮೇಳವನ್ನು ಹಮ್ಮಿಕೊಳ್ಳಲಾಯಿತು.
ಪ್ರಾಸ್ತಾವಿಕವಾಗಿ ಅನ್ವರ್ ಜಮಾದಾರ್ ಮಾತನಾಡುತ್ತಾ, ಮೂರು ವರ್ಷದ ಬುದ್ಧಿ ನೂರು ವರ್ಷದ ತನಕ ಎಂಬಂತೆ ಮಕ್ಕಳಲ್ಲಿ ಆರಂಭದ ಹಂತದ ಶಿಕ್ಷಣ ಅತ್ಯಂತ ಪ್ರಮುಖವಾಗಿರುತ್ತದೆ ಈ ಹಂತದಲ್ಲಿ ಮಕ್ಕಳಲ್ಲಿ ಭಾಷೆ ಬೆಳವಣಿಗೆಯು ಅತಿ ವೇಗದಲ್ಲಿ ಆಗುವುದರಿಂದ ಮಕ್ಕಳಲ್ಲಿ ಅಂಗನವಾಡಿ ಕೇಂದ್ರಗಳು ಪೂರಕ ಶಿಕ್ಷಣ ಕೊಡುವುದರ ಮೂಲಕ ಅವರಲ್ಲಿ ಶೈಕ್ಷಣಿಕ ಆಸಕ್ತಿ ಬೆಳೆಸುವಂತಾಗಲಿ ಎಂದು ಅಭಿಪ್ರಾಯಪಟ್ಟರು.
ಅಂಗನವಾಡಿ ಮಹಿಳಾ ಮೇಲ್ವಿಚಾರಕಿಯಾದ ಜಯಶ್ರೀ ಬಿರಾದಾರ್ ಮಾತನಾಡುತ್ತಾ, ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಸಹಾಯಕರಿಗೆ ಪೂರ್ವ ಪ್ರಾಥಮಿಕ ಕ್ಷಣಕ್ಕೆ ಅನೇಕ ತರಬೇತಿಗಳನ್ನು ಹಮ್ಮಿಕೊಳ್ಳುವುದರ ಜೊತೆಗೆ ಕೇಂದ್ರಗಳಿಗೆ ಭೇಟಿ ನೀಡಿ ಮಾರ್ಗದರ್ಶನ ಮಾಡುತ್ತಿರುವುದು ಸಲಹೆ ನೀಡುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಭೀಮಣ್ಣ ಮಾಜಿ ಸೈನಿಕರು ಮಕ್ಕಳು ಕಥೆ ಹಾಡು ಇನ್ನಿತರ ಕಾರ್ಯಕ್ರಮಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ದೀಪಮ್ಮ ಗ್ರಾಮ ಪಂಚಾಯತಿ ಅಧ್ಯಕ್ಷರು, ಹನುಮಂತ ಮಟ್ಲ ಸದಸ್ಯರು, ಭೀಮರಾಯ ಕಡಿಮನಿ, ತಿಪ್ಪಣ್ಣ ಶುಕ್ಲ , ನೀಲಗಂಗಾ ಸಿಹೆಚ್ಓ, ದಶರಥ್, ಅಂಗನವಾಡಿ ಮೇಲ್ವಿಚಾರಕಿಯರಾದ ಪದ್ಮಾವತಿ ನಾಯಕ್, ಶಶಿಕಲಾ, ಸಾವಿತ್ರಿ, ಮಹಾದೇವಿ, ಭಾಗಮ್ಮ, ಸುನಿತಾ, ಜಯಶ್ರೀ ,ಶಾಂತ ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣ ಬಿಜಾಸಪುರ್, ರಾಜಶೇಖರ್, ಅಂಗನವಾಡಿ ಕಾರ್ಯಕರ್ತರಾದ ಈಶ್ವರಮ್ಮ, ನಾಗರತ್ನ , ಸಾಬಮ್ಮ, ಮಂಜುಶ್ರೀ, ಹಸನಾಪುರ ಹಾಗೂ ಸುರಪುರ ಸರ್ಕಲ್ ನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಲಕ್ಷ್ಮಿಪುರದ ಪಾಲಕ ಪೋಷಕರು ಭಾಗವಹಿಸಿದ್ದರು
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…