ಸಾರಿಗೆ ಬಸ್ ಕಂದಕಕ್ಕೆ ಬಿದ್ದು ವ್ಯಕ್ತಿ ಸಾವು; ಹಲವರಿಗೆ ಗಾಯ

0
29

ಸುರಪುರ: ತಾಲೂಕಿನ ದೇವಾಪುರ ಕ್ರಾಸ್ ಬಳಿಯಲ್ಲಿನ ಹಳ್ಳದ ಬಳಿ ಖಾಸಗಿ ಬಸ್ ಕಂದಕಕ್ಕೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶುಕ್ರವಾರ ರಾತ್ರಿ ಬೀದರ ದಿಂದ ಬೆಂಗಳೂರಿಗೆ ಹೊರಟಿದ್ದ ಪೂಜಾ ಟ್ರಾವೆಲ್ಸ್‍ಗೆ ಸೇರಿದ ಬಸ್‍ನಲ್ಲಿ ಮೂವತ್ತಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು,ಹಳ್ಳದ ಬಳಿಯ ತಿರುವಿನಲ್ಲಿ ಚಾಲಕನ ಅಜಾಗರೂಕತೆಯಿಂದ ಬಸ್ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ,ಇದರಿಂದ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಬೀದರ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ ಕೆ ಗ್ರಾಮದ ಬಾಲಕುಮಾರ ಸದ್ಲಾಪುರ ಎನ್ನುವ 37 ವರ್ಷದ ವ್ಯಕ್ತಿ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.

Contact Your\'s Advertisement; 9902492681

ಇನ್ನುಳಿದ 25 ಜನರಿಗೆ ಗಾಯಗಳಾಗಿವೆ,ಗಾಯಾಳುಗಳನ್ನು ಕಲಬುರ್ಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ,ಘಟನಾ ಸ್ಥಳಕ್ಕೆ ಸುರಪುರ ಠಾಣೆ ಪೊಲೀಸಲು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here