ಬಿಸಿ ಬಿಸಿ ಸುದ್ದಿ

ಭಾರತೀಯ ಸಂಸ್ಕøತಿ ಜಾನಪದ ಸಾಹಿತ್ಯದಲ್ಲಿ ಕಾಣಲು ಸಾಧ್ಯ

ಸುರಪುರ: ಭಾರತೀಯ ಸಂಸ್ಕೃತಿಯನ್ನು ನಾವು ಜಾನಪದ ಸಾಹಿತ್ಯದಲ್ಲಿ ಮಾತ್ರ ಕಾಣಲು ಸಾಧ್ಯ, ಬದುಕು ಹಾಗೂ ಸಂಬಂಧವನ್ನು ಕಟ್ಟಲು ಜನಪದ ಸಾಹಿತ್ಯ ಮುಖ್ಯವಾಗಿದೆ ಎಂದು ಲಕ್ಷ್ಮೀಪುರದ ಶ್ರೀಗಿರಿ ಸಂಸ್ಥಾನದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಮಾತನಾಡಿದರು.

ಶ್ರೀಮಠದ ಆವರಣದಲ್ಲಿ ಶ್ರೀ ಗುರು ಪುಟ್ಟರಾಜ ಜನ ಕಲ್ಯಾಣ ಸೇವಾ ಸಮಿತಿ ಬೋನ್ಹಾಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯೋಗದಲ್ಲಿ ಹಮ್ಮಿಕೊಂಡಿದ್ದ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ,ಕಲೆ, ನಾಟಕಗಳು ಮಾನವನ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ಮನಸ್ಸಿಗೆ ಉಲ್ಲಾಸ, ಆನಂದವನ್ನು ತುಂಬುತ್ತದೆ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಮಾಜಿಕವಾಗಿ ಒಗ್ಗಟ್ಟು ಪ್ರದರ್ಶಿಲು ಪೂರಕವಾಗಲಿದೆ ಎಂದ ಅವರು, ಟಿ.ವಿ, ಕಂಪ್ಯೂಟರ್, ಇಂಟರ್ನೆಟ್ ಯುಗದಲ್ಲಿ ಪೌರಾಣಿಕ ನಾಟಕ, ಜಾನಪದ ಕಲೆಗಳು ಮಾಯವಾಗುತ್ತಿದ್ದು, ನಮ್ಮ ಸಂಸ್ಕೃತಿಯ ಸೊಗಡನ್ನು ನಾವು ಕಾಪಾಡಿಕೊಂಡು ಹೋಗಬೇಕು. ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದರು.

ಜಾನಪದ ಕಲೆ ಭಾರತೀಯ ಸಂಸ್ಕೃತಿಯ ಮಾತೃ ಸಂಸ್ಕೃತಿಯಾಗಿದೆ. ಇದು ಗ್ರಾಮೀಣ ಸಂಪ್ರದಾಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದೆ ಎಂದು ಅವರು ಹೇಳಿದರು ಮತ್ತು ಗ್ರಾಮೀಣ ಮತ್ತು ಜಾನಪದ ಸಂಸ್ಕೃತಿಗೆ ಸಮಾನಾಂತರವಾಗಿ ಹಿಂದೆ ಹಳ್ಳಿಗಳಲ್ಲಿ ಹಬ್ಬ, ಮದುವೆ, ಶುಭ ಕಾರ್ಯಗಳಲ್ಲಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಹಾಡುವ ಪದಗಳು ಜಾನಪದಗಳಾಗಿ ಪ್ರಸ್ತುವಾಗಿವೆ. ಆಧುನಿಕತೆ ಪ್ರಭಾವ ಜಾನಪದ ಸಂಸ್ಕೃತಿ ಕಡಿಮೆಯಾಗಿದೆ. ಜಾಗತೀಕರಣದ ಪ್ರಭಾವದಲ್ಲೂ ಜನಪದ ಜನರಲ್ಲಿ ಉಳಿದಿದೆ. ಅದನ್ನು ಬೆಳೆಸಿಕೊಂಡು ಹೋಗುವ ಗುರಿ ಯುವ ಸಮುದಾಯದ ಮೇಲಿದೆ ಎಂದರು.ಆಧುನಿಕತೆ ಭರಾಟೆ ನಡುವೆಯೂ ಜನಪದ ಹಳ್ಳಿಗರಿಂದಲೇ ಜೀವಂತವಾಗಿದೆ. ಆದಿಮಾನವ, ಬುಡಕಟ್ಟು ಸಮುದಾಯಗಳಿಂದ ತಲೆತಲಾಂತದಿಂದ ಹರಿದು ಬಂದ ಜೀವನ ಅನುಭವದ ರಸಗಟ್ಟೇ ಜಾನಪದವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಕ್ಷೀರಲಿಂಗಯ್ಯ ಹಿರೇಮಠ ಬೋನ್ಹಾಳ ಮಾತನಾಡಿ, ಜಾನಪದ ಸಾಹಿತ್ಯವು ಕನ್ನಡ ಸಾಹಿತ್ಯದಲ್ಲಿ ಅತ್ಯಂತ ಶ್ರೀಮಂತವಾಗಿದೆ ಎಂದು ತಿಳಿಸಿದರು.

ಹಿರಿಯ ಕಲಾವಿದ ರಾಜಶೇಖರ ಗೆಜ್ಜೆ ಮಾತನಾಡಿ ಜನಪದ ಜನರ ಬಾಯಿಂದ ಬಾಯಿಗೆ ಹರಿದು ಬಂದದ್ದು, ಅದರ ನಾಶ ಆಗೋದು ಅಷ್ಟೊಂದು ಸುಲಭವಲ್ಲ. ನಮ್ಮ ಸಮೂಹ ಎಲ್ಲರೂ ಜವಾಬ್ದಾರಿ ವಹಿಸಿ ಜನಪದದ ಉಳಿವಿಗೆ ಶ್ರಮಿಸಬೇಕಿದೆ. ಆಧುನಿಕ ಕಾಲಮಾನಕ್ಕೆ ತಕ್ಕಂತೆ ಬದಲಾಗುತ್ತಿರುವ ಜಾನಪದ ಸಾಹಿತ್ಯ ಸಂಸ್ಕೃತಿಯ ಎಲ್ಲ ನೆಲೆಗಳಲ್ಲೂ ವ್ಯಾಪಿಸುವ ಅವಶ್ಯಕತೆಯಿದೆ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಜಾನಪದ ತಂಡಗಳಿಂದ ಗ್ರಾಮೀಣ ಸೊಗಡಿನ ಸೋಬಾನ ಪದ, ಜಾನಪದ ಗೀತೆ, ಬೀಸುವ ಪದ, ಕುಟ್ಟುವ ಪದ, ಮಹಿಳಾ ಭಜನಾ ಪದ, ಭಕ್ತಿ ಗೀತೆಗಳು, ತಬಲಾ ಸೋಲ್ , ತಮ್ಮಟೆ ವಾದ್ಯ,ಸಾಂಪ್ರದಾಯಿಕ ಹಾಡುಗಳು ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳು ನಡೆದವು.

emedialine

Recent Posts

ನಾಡೋಜ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ: ಜುಲೈ 7ರಂದು

ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…

46 mins ago

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

11 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

12 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

12 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

12 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

13 hours ago