ಶಿಕ್ಷಕ ಸಾಮ್ಯುವೇಲ್‍ಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

0
8

ಸುರಪುರ: ನಗರದ ಖುರೇಷಿ ಮೊಹಲ್ಲಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಸಾಮ್ಯುವೇಲ್ ಅವರಿಗೆ ಬೆಂಗಳೂರನ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ನೀಡಲಾಗುವ ಶ್ರೀಮತಿ ಅನಿತಾ ಕೌಲ್ ಸ್ಮರಣೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಬೆಂಗಳೂರನ ನ್ಯಾಷನಲ್ ಕಾಲೇಜಿನ ಡಾ.ಹೆಚ್.ಎನ್. ಮಲ್ಟಿಮಿಡೀಯಾ ಸಭಾಂಗಣದಲ್ಲಿ ಜರುಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಿಂತಕ ಹಾಗೂ ಶಿಕ್ಷಣ ತಜ್ಞ ಬರಗೂರು ರಾಮಚಂದ್ರಪ್ಪ ಅವರು ಶಾಲು ಹೊದಿಸಿ ಸ್ಮರಣಿಕೆ ಹಾಗೂ ಪ್ರಶಸ್ತಿ ನೀಡಿ ಸನ್ಮಾನಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಅಧ್ಯಕ್ಷ ಹಾಗೂ ವಿಜ್ಞಾನ ಲೇಖಕ ಡಾ.ಸಿ.ಆರ್.ಚಂದ್ರಶೇಖರ, ಕಾರ್ಯದರ್ಶಿ ಈ ಬಸವರಾಜು, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಹೆಚ್.ಎಲ್.ಪುಷ್ಪ,ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ,ಸಮಿತಿಯ ಉಪಾಧ್ಯಕ್ಷ ಡಾ.ಆರ್.ಎನ್.ರಾಜಾನಾಯಕ,ಡಾ.ಹೆಚ್.ಕೆ.ಎಸ್.ಸ್ವಾಮಿ,ಶಿವರಾಜ ಕಪಲಾಪುರೆ,ಸಹ ಕಾರ್ಯದರ್ಶಿಗಳಾದ ಹೆಚ್.ವಿ.ಮುರುಳೀಧರ, ಎನ್.ಪ್ರಭಾ ಹಾಗೂ ಡಿ.ಎಂ.ಮಂಜುನಾಥಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here