ಡಾ. ಮಲ್ಲಿಕಾರ್ಜುನ ಖರ್ಗೇ ಸಮ್ಮುಖದಲ್ಲಿ ಕಸಾಪದಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹೊರತಂದಿರುವ 2024 ನೇ ಸಾಲಿನ ಸಂಪೂರ್ಣ ಕನ್ನಡದ ಅಂಕಿಗಳನ್ನು ಹೊಂದಿದ ಆಕರ್ಷಣೀಯವಾದ ದಿನದರ್ಶಿಕೆಯನ್ನು ರಾಜ್ಯಸಭೆಯ ವಿಪಕ್ಷ ನಾಯಕರೂ ಆದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೇ ಅವರ ಸಮ್ಮುಖದಲ್ಲಿ ಮಂಗಳವಾರ ನಗರದ ಬುದ್ಧವಿಹಾರದಲ್ಲಿ ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ವರ್ತಮಾನದ ಪೀಳಿಗೆಯನ್ನು ಜೋಡಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ತಾಲೂಕು ಹಾಗೂ ಹೋಬಳಿ ಘಟಕಗಳ ಮೂಲಕ ಗ್ರಾಮೀಣ ಭಾಗಕ್ಕೆ ಸಾಹಿತ್ಯ ಪರಿಷತ್ತನ್ನು ಕೊಂಡೊಯ್ದು ವಿದ್ಯಾರ್ಥಿ ಸಮುದಾಯಗಳನ್ನು ಜಾಗೃತಗೊಳಿಸಿ ಸಾಹಿತ್ಯದ ಬಗ್ಗೆ ಒಲವನ್ನು ಮೂಡಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ, ಶ್ರಮಿಕರ, ರೈತರ, ಶೋಷಿತರ ನಡುವೆ ಸಾಹಿತ್ಯದ ಕೊಂಡಿಯಾಗಿ ಪರಿಷತ್ತು ಕಾರ್ಯ ನಿರ್ವಹಿಸುತ್ತಿದೆ ಎಂದ ಅವರು,

ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಅವರ ಬಳಗ ಬಹಳ ಕ್ರಿಯಾಶೀಲವಾಗಿ ಕಾರ್ಯ ಮಾಡುತ್ತಿದ್ದು, ಪರಿಷತ್ತನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಕಟ್ಟುತ್ತಿದ್ದು, ಉತ್ತಮ ಮತ್ತು ಹೊಸ ಹೆಜ್ಜೆಗಳನ್ನು ಇಡುವ ಮೂಲಕ ಸಾಹಿತ್ಯಸಾಂಸ್ಕøತಿಕ ಕ್ಷೇತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತಿದ್ದಾರೆ.

ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಇದುವರೆಗೂ ಕೇವಲ ಸಾಹಿತಿಗಳ ಸಮೀಪದಲ್ಲಿತ್ತು. ಅದು ಎಲ್ಲ ಕನ್ನಡಿಗರ ಆಸ್ತಿ ಎಂದು ತೋರಿಸಲಿಕ್ಕೆ ಹೊರಟಿರುವ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಕಾರ್ಯ ಶ್ಲಾಘನೀಯ ಎಂದು ಮನದುಂಬಿ ಹಾರೈಸಿದರು.

ಯಾದಗಿರಿ ಶಾಸಕ ಚೆನ್ನಾರೆಡ್ಡಿ ತುನ್ನೂರ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ನಾಗನ್ನಾಥ ಯಳಸಂಗಿ ನಿಂಬರ್ಗಾ, ಪ್ರಮುಖರಾದ ನೀಲಕಂಠರಾವ ಮೂಲಗೆ, ಜಗನ್ನಾಥ ಗೋದಿ, ಪರಮೇಶ್ವರ ಖಾನಾಪೂರ, ದೇವೇಂದ್ರಪ್ಪ ಮರತೂರ, ಮಲ್ಲಿಕಾರ್ಜುನ ಪೂಜಾರಿ, ಪ್ರಶಾಂತ ಕೊರಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

44 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

54 mins ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

56 mins ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420