ಕಲಬುರಗಿ: ಹಾವೇರಿ ಜಿಲ್ಲೆಯ ನರಸೀಪುರದಲ್ಲಿ ಜ.14 ಮತ್ತು 15ರಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ, ವಚನ ಗ್ರಂಥ ಮಹಾಮಹೋತ್ಸವ ಸೇರಿ ನಾನಾ ಕಾರ್ಯಕ್ರಮ ನಡೆಯಲಿವೆ ಎಂದು ಕೋಲಿ ಕಬ್ಬಲಿಗ ಸಮಾಜದ ರಾಜ್ಯಾಧ್ಯಕ್ಷ ಬಸವರಾಜ ಸಪ್ಪನಗೋಳ ಹೇಳಿದರು.

ನರಸೀಪೂರದ ಶ್ರೀನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ಈ ಬಾರಿ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ, ಲಿಂ.ಶ್ರೀ ಶಾಂತಮುನಿ ಸ್ವಾಮೀಜಿಗಳ 8ನೇ ಸ್ಮರಣೋತ್ಸವ, ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಗಳ 8ನೇ ಪೀಠಾರೋಹಣ ಮಹೋತ್ಸವ, ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮಗಳು ಜ.14 ಮತ್ತು 15ರಂದು ನಡೆಯಲಿವೆ ಎಂದು ಹೇಳಿದರು.

ಜ.14ರಂದು ಬೆಳಗ್ಗೆ 6ಕ್ಕೆ ಸುಮಂಗಲೆಯರಿಂದ ತೊಟ್ಟಿಲೋತ್ಸವ, 8ಕ್ಕೆ ನಿಜ ಶರಣ ಅಂಬಿಗರ ಚೌಡಯ್ಯನವರ ಗದ್ದುಗೆ ಪೂಜೆ, ಬೆಳಗ್ಗೆ 11ಕ್ಕೆ ರಕ್ತದಾನ ಶಿಬಿರ, ಮಧ್ಯಾಹ್ನ 1.30ಕ್ಕೆ ವಚನ ಕಂಠಪಾಠ ಸ್ಪರ್ಧೆ, ಸಂಜೆ 5.30ಕ್ಕೆ ಸಾಂಸ್ಕೃತಿಕ ಮತ್ತು ಜಾನಪದ ಕಲಾ ಮಹೋತ್ಸವದ ಉದ್ಘಾಟನೆ ನಡೆಯಲಿದ್ದು, ದಿವ್ಯ ಉಪಸ್ಥಿತಿ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಸವಿವ ಮಂಕಾಳ ವೈದ್ಯ, ಶಾಸಕ ಪ್ರಕಾಶ ಕೋಳಿವಾಡ ಸೇರಿ ಹಲವು ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಜ.15ರಂದು ಬೆಳಗ್ಗೆ 8ಕ್ಕೆ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರಿಂದ ಧರ್ಮ ಧ್ವಜಾರೋಹಣ ನಡೆಯಲಿದೆ. ಬೆಳಗ್ಗೆ 8.30ಕ್ಕೆ ಸಾಮೂಹಿಕ ವಿವಾಹ, 10ಕ್ಕೆ ಧರ್ಮ ಸಭೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ, ನಿಜ ಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಹಲವು ಸ್ವಾಮೀಜಿಗಳು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಈ ಭಾಗದ ಸಮುದಾಯದ ಜನರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪಿಡಪ್ಪ ಜಾಲಗಾರ, ವಿದ್ಯಾಧರ ಮಂಗಳೂರು, ಪಿತಾಂಬರ ಕೋಲಿ ಇದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

9 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420