ಬಿಸಿ ಬಿಸಿ ಸುದ್ದಿ

ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮಾಜಕ್ಕೆ ಕನಿಷ್ಠ 5 ಸೀಟ್ ನೀಡಲು ಆಗ್ರಹ

ಕಲಬುರಗಿ: ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯದಲ್ಲಿ ಕನಿಷ್ಠ 5 ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಬೇಕು ಎಂದು ಕರ್ನಾಟಕ ಮುಸ್ಲಿಂ ಪಾಲ್ಟೀಕ್ಸ್ ಫೋರ್ಮ್ ರಾಜ್ಯ ಉಪಾಧ್ಯಕ್ಷ ಸಲಾಂ ಪಾಷಾ ಆಗ್ರಹಿಸಿದ್ದಾರೆ.

ಚಿಂಚೋಳಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದ 28 ಲೋಕಸಭೆಯ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವು 7 ಕ್ಷೇತ್ರದಲ್ಲಿ ನಿರ್ಣಾಯಕವಾಗಿ ಗೆಲವು ಸಾಧಿಸುವ ಕ್ಷೇತ್ರಗಳಾಗಿವೆ. ಬೀದರ,ಬೆಂಗಳೂರು ಸೆಂಟ್ರಲ್,ಹುಬ್ಬಳ್ಳಿ-ಧಾರವಾಡ,ಮಂಗಳೂರ,ಹಾವೇರಿ ಲೋಕಸಭೆಗಳಲ್ಲಿ ಟಿಕೆಟ್ ನೀಡಬೇಕು ಎಂದರು.

ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ತರಲು ಮುಸ್ಲಿಂ ಸಮುದಾಯದ ಕುಡುಗೆ ಹೆಚ್ಚಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯದ ಈ ಕೊಡೆಗೆಯನ್ನು ಗಮನದಲ್ಲಿಟ್ಟಿಕೊಂಡು ತೀರ್ಮಾನ ಕೈಗೊಂಡರೇ ಸ್ಪಷ್ಟ ಬಹುಮತದಿಂದ ಐದು ಕ್ಷೇತ್ರದಲ್ಲಿ ಗೆಲವು ಸಾಧಿಸಬುದೆಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ನಾಸೀರ ಮೌಲಾನಸಾಬ ಮಾತನಾಡಿ ಕಳೆದ 20ವರ್ಷದಿಂದ ಕಲಬುರ್ಗಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಿಲ್ಲ. ಸಕಾಷ್ಟು ಸಮಸ್ಯೆಗಳು ಬಂದರೂ ಸಹ ಯಾರು ಧ್ವನಿಯೇತ್ತುತ್ತಿಲ್ಲ. ರಾಜ್ಯದಲ್ಲಿ ಮುಸ್ಲಿಂ ಸಮಾಜದ ಮತಗಳು ಶೇ.40ಪ್ರತಿಶತಃ ಮತಗಳಿದ್ದು ಕಾಂಗ್ರೆಸ್ ಪಕ್ಷವು ಮತಗಳು ಪಡೆದು ಮುಸ್ಲಿಂರಿಗೆ ಟಿಕೆಟ್ ನೀಡದೆ ವಂಚನೆ ಮಾಡುತಿದೆ ಎಂದು ಆಕ್ರೋಶ ಹೊರಹಾಕಿದರು.

20 ವರ್ಷದಿಂದ ಕಲಬುರಗಿಯಲ್ಲಿ ಎಸ್ಸಿ ಮೀಸಲಾತಿ ನಂತರ ಬೀದರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಬಹುದಿತ್ತು ಆದರೆ ಟಿಕೆಟ್ ನೀಡದೆ ಸಮುದಾಯಕ್ಕೆ ವಂಚನೆ ಮಾಡಲಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದ ಅವರು, ಮುಸ್ಲಿಂ ಸಮಾಜದ ಸಮಸ್ಯೆಗಳ ಪರವಾಗಿ ಧ್ವನಿಯಾಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ರಾಜ್ಯದಲ್ಲಿರುವ ನಿರ್ಣಯಕ ಮುಸ್ಲಿಂ ಮತಗಳಲಿರುವ ಕ್ಷೇತ್ರಗಳಲ್ಲಿ ಸಮುದಾಯದಕ್ಕೆ ಟಿಕೆಟ್ ನೀಡಿ ಗೆಲ್ಲಿಸುವ ಕೆಲಸ ಮಾಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಚಿಂಚೋಳಿ ಪುರಸಭಾ ಸದಸ್ಯರಾದ ಅಬ್ದುಲ್ ಬಾಷೀದ್, ಅಬ್ದುಲ್ ಹಮೀದ್ ಹಾಫೀಜ್, ಅನ್ವರ ಖತೀಬ್, ಡಾ. ಮಹ್ಮುದ್ ರಫೀ, ಅಲಿಂಸಾಬ, ಮತೀನ ಸೌದಾಗಾರ ಮಾತನಾಡಿದರು.

ಅಲೀಂ ಅಹಮದ್, ಸಂಚಾಲಕ ಸೈಯದ್ ಸಲಾಂ ಪಾಷಾ, ಗ್ರಾ.ಪಂ.ಅಧ್ಯಕ್ಷ ನಾಸೀರ್ ಮೌಲಾನಾ, ಜಿಲ್ಲಾ ಸೆ. ಅನ್ವರ್ ಸಿಲೇದಾರ್ ಮತ್ತು ಕೆಎಂಪಿಎಫ್ ಕಾರ್ಯದರ್ಶಿ ಅಫ್ಜಾಲ್ ಮಹಮೂದ್, ಮತೀನ್ ಸೌದಾಗರ, , ಶೇಖ್ ಫರೀದ್, ಮೌಲಾನಾ ನೌಮಾನ್ ಪಟೇಲ್, ಅಸ್ಲಾಂ ಸೌದಾಗರ್, ಜಹೂರ್ ಶಾ, ಹಾಸಿಂ ಹಶ್ಮಿ, ಇಸ್ಮಾಯಿಲ್ ಹಫೀಜ್, ನುಮಾನ ಪಟೇಲ,ಶೇಖ್ ಫರೀದ್,ಇಸ್ಮಾಯಿಲ್ ಹಾಫೀಜ್,ಹಸೇನ ಹಾಶ್ಮಿ,ಜಹುರಶಾ,ಅಸ್ಲಾಂ ಸೌದಾಗಾರ,ಮಖ್ದೂಮ್ಖಾನ್ ಮತ್ತಿತರರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

20 mins ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

2 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

2 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

3 hours ago

ನಾಗಾವಿ, ಕಾಳಗಿ ಸ್ಮಾರಕಗಳ ಸಂರಕ್ಷಣೆಗೆ ಕ್ರಮ; ಪ್ರವಾಸಿಗಳಿಗೆ ಸೌಲಭ್ಯ | ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ; ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು…

3 hours ago

ಸಂಗೊಳ್ಳಿ ರಾಯಣ್ಣನಿಗೆ ಅವಮಾನ – ಕಿಡಿಗೇಡಿಗಳ ಬಂಧನಕ್ಕೆ ತಿಪ್ಪಣ್ಣ ಕ್ಯಾತನಾಳ ಆಗ್ರಹ

ಶಹಪುರ: ದೇಶಾಭಿಮಾನಿ,ಸ್ವಾಭಿಮಾನಿ, ಕೆಚ್ಚೆದೆಯ ವೀರ ಸಂಗೊಳ್ಳಿ ರಾಯಣ್ಣನಿಗೆ ಅವಮಾನಿಸಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಶ್ರೀ ಕನಕದಾಸ ಶಿಕ್ಷಣ ಮತ್ತು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420