ಬಿಸಿ ಬಿಸಿ ಸುದ್ದಿ

ಗುಲಬರ್ಗಾ ವಿಶ್ವ ವಿದ್ಯಾಲಯದ ಖೋ ಖೋ ಪಂದ್ಯಾವಳಿ ಗೆದ್ದ ಸುರಪುರ ತಂಡ

ಸುರಪುರ: ನಗರದ ಶ್ರೀಪ್ರಭು ಮಹಾ ವಿದ್ಯಾಲಯ ಮೈದಾನದಲ್ಲಿ ನಡೆದ ಗುಲಬರ್ಗಾ ವಿಶ್ವ ವಿದ್ಯಾಲಯ ಏಕ ವಲಯ ಮಟ್ಟದ ಖೋ ಖೋ ಪಂದ್ಯಾವಳಿಯನ್ನು ಶ್ರೀಪ್ರಭು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಗೆದ್ದು ಚಾಂಪಿಯನ್ನಾದರು.

ಮಂಗಳವಾರ ನಡೆದ ವಿಶ್ವ ವಿದ್ಯಾಲಯ ವ್ಯಾಪ್ತಿಯ ಬೀದರ,ಕಲಬುರ್ಗಿ,ಯಾದಗಿರಿ,ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ವಿವಿದ ಕಾಲೇಜುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಅಂತಿಮವಾಗಿ ಶ್ರೀಪ್ರಭು ಕಾಲೇಜು ಮತ್ತು ಲಿಂಗಸೂಗುರಿನ ಎಸ್‌ಎಮ್‌ಎಲ್‌ಬಿ ಕಾಲೇಜು ಫೈನಲ್ ಹಂತ ತಲುಪಿ ನಂತರ ಶ್ರೀಪ್ರಭು ಕಾಲೇಜಿನ ವಿದ್ಯಾರ್ಥಿಗಳು ಗೆದ್ದು ಪ್ರಥಮ ಬಹುಮಾನ ಪಡೆದರೆ,ಲಿಂಗಸೂಗುರಿನ ಕಾಲೇಜು ವಿದ್ಯಾರ್ಥಿಗಳು ದ್ವತಿಯ ಸ್ಥಾನ ಪಡೆದು ರನ್ನರಪ್ ಆಗಿ ಹೊರ ಹೊಮ್ಮಿದರು. ನಂತರ ನಡೆದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎಸ್.ಹೆಚ್.ಹೊಸ್ಮನಿ ಮಾತನಾಡಿ,ಒಂದು ವಿಶ್ವವಿದ್ಯಾಲಯ ಮಟ್ಟದ ಪಂದ್ಯಾವಳಿಯನ್ನು ಯಾವುದೆ ಸಮಸ್ಯೆಯಿಲ್ಲದಂತೆ ನಿರ್ವಹಿಸಿದ ಎಲ್ಲಾ ದೈಹಿಕ ಶಿಕ್ಷಕರಿಗೆ ಮತ್ತು ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಿದ ಮಹನಿಯರಿಗೆ ಧನ್ಯವಾದ ಅರ್ಪಿಸಿದರು.

ಕಾಲೇಜಿನ ಉಪ ಪ್ರಾಚಾರ್ಯ ವೇಣುಗೋಪಾಲ ಜೇವರ್ಗಿ ಮಾತನಾಡಿ,ಎಲ್ಲಾ ಕ್ರೀಡಾಪಟುಗಳು ಕ್ರೀಡಾ ಮನೋಭಾವ ಮೆರೆದು ಸಾಮರ್ಥ್ಯ ಮೆರೆದು ಜಯಶೀಲರಾಗಿದ್ದೀರಿ.ಗೆದ್ದವರು ಆ ಸ್ಥಾನ ಉಳಿಸಿಕೊಳ್ಳುವುದು ಮುಖ್ಯವಾಗಿದೆ.ಅದರಂತೆ ಸೋತ ತಂಡ ಮುಂದೆ ಪ್ರಥಮ ಸ್ಥಾನ ಪಡೆಯುವತ್ತ ತರಬೇತಿ ಪಡೆದು ಜಯಗಳಿಸುವಂತೆ ಹಾರೈಸಿದರು.ಇದೇ ಸಂದರ್ಭದಲ್ಲಿ ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶರಣಗೌಡ ಪಾಟೀಲ ಹಾಗು ಲಿಂಗಸೂಗುರಿನ ಎಸ್‌ಎಮ್‌ಎಲ್‌ಬಿ ಕಾಲೇಜಿನ ದೈಹಿಕ ನಿರ್ದೇಶಕ ವಿರೇಶ ಮಾತನಾಡಿದರು.ನಂತರ ವಿನ್ನರ್ ಹಾಗು ರನ್ನರಪ್ ಎರಡೂ ತಂಡಗಳಿಗೆ ಆಕರ್ಷಕ ಟ್ರೋಪಿ ನೀಡಿ ಗೌರವಿಸಲಾಯಿತು.ಅಲ್ಲದೆ ಅತ್ಯೂತ್ತಮ ದಾಳಿಗಾರನಾಗಿ ಆಯ್ಕೆಯಾದ ಜಾವೇದ ಹುಸೇನ ಹಾಗು ಉತ್ತಮ ಓಡುಗಾರನಾಗಿ ಆಯ್ಕೆಯಾದ ಸಂತೋಷ ಲಿಂಗಸೂಗುರು ಇಬ್ಬರಿಗೂ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ವೇದಿಕೆ ಮೇಲೆ ಶ್ರೀಪ್ರಭು ಕಾಲೇಜಿನ ದೈಹಿಕ ನಿರ್ದೇಶಕ ರಮೇಶ್ ಶಹಾಪುರಕರ್,ವಾರೀಸ್ ಕುಂಡಾಲೆ,ಎಸ್.ಎಸ್.ಪಾಟೀಲ ಇದ್ದರು.ಡಾ:ಸಾಯಿಬಣ್ಣ ಮುಡಬೂಳ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.ಅನೇಕ ಜನ ದೈಹಿಕ ಶಿಕ್ಷಕರು, ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗು ಕ್ರೀಡಾಪಟುಗಳು ಭಾಗವಹಿಸಿದ್ದರು.

emedialine

Recent Posts

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

1 hour ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

1 hour ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

1 hour ago

ನಾಗಾವಿ, ಕಾಳಗಿ ಸ್ಮಾರಕಗಳ ಸಂರಕ್ಷಣೆಗೆ ಕ್ರಮ; ಪ್ರವಾಸಿಗಳಿಗೆ ಸೌಲಭ್ಯ | ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ; ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು…

2 hours ago

ಸಂಗೊಳ್ಳಿ ರಾಯಣ್ಣನಿಗೆ ಅವಮಾನ – ಕಿಡಿಗೇಡಿಗಳ ಬಂಧನಕ್ಕೆ ತಿಪ್ಪಣ್ಣ ಕ್ಯಾತನಾಳ ಆಗ್ರಹ

ಶಹಪುರ: ದೇಶಾಭಿಮಾನಿ,ಸ್ವಾಭಿಮಾನಿ, ಕೆಚ್ಚೆದೆಯ ವೀರ ಸಂಗೊಳ್ಳಿ ರಾಯಣ್ಣನಿಗೆ ಅವಮಾನಿಸಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಶ್ರೀ ಕನಕದಾಸ ಶಿಕ್ಷಣ ಮತ್ತು…

3 hours ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಚುನಾವಣೆ 25ರಂದು

ಕಲಬುರಗಿ: ಆ. 25 ರಂದು ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ 27 ಸ್ಥಾನಗಳಿಗೆ (…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420