ಠಾಣಾಧಿಕಾರಿ ವಿರುದ್ಧ ಕ್ರಮಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

0
41

ಮಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲ, ಅಪಮಾನಕರ,ಅಸಾಂವಿದಾನಿಕ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರತಿಭಟನೆ ನಡೆಸಲು ಸತಾಯಿಸಿದ ಠಾಣಾಧಿಕಾರಿ ವಿರುದ್ಧ ಸೂಕ್ತ ಕಾನೂನನ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಸಮಿತಿಯ ವತಿಯಿಂದ ದೂರು ಸಲ್ಲಿಸಿದರು.

ಠಾಣೆಯ ಉಪ ನಿರ್ದೇಶಕರು ಪ್ರತಿಭಟಿಸಲು ಸೂಕ್ತ ಭದ್ರತೆ ನೀಡಲು ಕೋರಿ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ತೆರಳಿದ ವಿಮೆನ್ ಇಂಡಿಯಾ ಮೂವ್ಮೆಂಟ್ ನ ಜಿಲ್ಲಾ ಪದಾಧಿಕಾರಿಗಳನ್ನು ಸತಾಯಿಸಿ ಅವರ ಮೇಲೆ 107 ನೋಟೀಸ್ ಜಾರಿಗೊಳಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ  ರಾಜ್ಯ ಉಪಾಧ್ಯಕ್ಷೆ ಶಾಝಿಯಾ ಬೆಂಗಳೂರು ,ರಾಜ್ಯ ಸಮಿತಿ ಸದಸ್ಯೆ ಸಾನಿಯಾ ಮೈಸೂರು,ಬೆಂಗಳೂರು ಜಿಲ್ಲಾಧ್ಯಕ್ಷೆ ಸುಮಯ್ಯಾ,ಕಾರ್ಯದರ್ಶಿ ಆಯಿಷಾ,ಜಿಲ್ಲಾ ಸಮಿತಿ ಸದಸ್ಯೆ ಆಯಿಷಾ ಸಯೀದಾ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here