ಶಹಾಬಾದ: ಜನವರಿ 22ರಂದು ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆಯ ಶ್ರೀರಾಮ ಲಲ್ಲಾನ ವಿಗ್ರಹ ಪ್ರತಿμÉ್ಠಯ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಅಭಿಯಾನದಲ್ಲಿ ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದ ಮನೆಮನೆಗೆ ಮಂತ್ರಾಕ್ಷತೆ ವಿತರಿಸಲಾಯಿತು.
ಗ್ರಾಮದ ಯುವಮುಖಂಡರು ಮನೆಮನೆಗೆ ತೆರಳಿ ಜನವರಿ 22ರ ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ಸುಮುಹೂರ್ತದಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿμÉ್ಠ ನಡೆಯಲಿದೆ. ಇದನ್ನು ಪ್ರತೀ ರಾಮಭಕ್ತರು ತಮ್ಮತಮ್ಮ ಊರು, ಮನೆಗಳಲ್ಲಿ ಸಂಭ್ರಮದಿಂದ ಆಚರಿಸುವಂತಾಗಲು ಈ ಅಭಿಯಾನ ನಡೆಸಲಾಗುತ್ತಿದೆ.
ಶ್ರೀರಾಮಲಲ್ಲಾನ ವಿಗ್ರಹ ಪ್ರತಿμÉ್ಠಯ ದಿನ ಸೂರ್ಯಾಸ್ತದ ಬಳಿಕ ಎಲ್ಲ ಮನೆಗಳಲ್ಲಿ ಕನಿಷ್ಠ ಐದು ದೀಪ ಬೆಳಗಬೇಕು, ಮನೆಯವರೆಲ್ಲರೂ ಸೇರಿ ಅಯೋಧ್ಯೆ ಮಂದಿರ ಇರುವ ಉತ್ತರ ದಿಕ್ಕಿಗೆ ಮುಖ ಮಾಡಿ ಮಹಾ ಮಂಗಳಾರತಿ ಬೆಳಗಬೇಕು ಎಂದು ತಿಳಿಸಿ ಮಂತ್ರಾಕ್ಷೇತಗಳ್ಳನ್ನು ವಿತರಣೆಮಾಡಲಾಗುತ್ತಿದೆ ಎಂದರು. ಅಲ್ಲದೇ ಮಂದಿರದ ಭಾವಚಿತ್ರ ಹಾಗೂ ಕರಪತ್ರಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸುಭಾಷ ಜಾಪೂರ,ಬಸವರಾಜ ಮದ್ರಕಿಮ ಶ್ರೀಶೈಲಗೌಡ ರಾಮಶೆಟ್ಟಿ, ಪ್ರಕಾಶರೆಡ್ಡಿ,ಸಿದ್ದು ಸಜ್ಜನ್, ಅಣವೀರ.ಎಸ್.ಗೊಳೇದ್, ಮಲ್ಲಿಕಾರ್ಜುನ ಗೊಳೇದ್,ಭೀಮರಾವ ಹೂಗಾರ,ಮನ್ನು ನಾಟೇಕಾರ,ಸಿದ್ದಣ್ಣಗೌಡ.ಎಸ್.ಭಮ್ಮಶೆಟ್ಟಿ, ಚಂದ್ರಪ್ರಕಾಶ.ಆರ್.ಹಿರೇಮಠ ಇನ್ನಿತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…