ಬಜೆಟ್ ನಲ್ಲಿ ಪ್ರಸ್ತಾಪಿಸಬಹುದಾದ ಯೋಜನೆಗಳ ಕುರಿತು ಪ್ರಸ್ತಾವನೆ ಸಲ್ಲಿಸಲು ಡಿ.ಸಿ. ಸೂಚನೆ

ಕಲಬುರಗಿ: ರಾಜ್ಯ ಸರ್ಕಾರವು 2024-25ನೇ ಸಾಲಿನ ಅಯವ್ಯಯ‌ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದು, ಜಿಲ್ಲೆಯಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗೆ ಸಂಬಂಧಿಸಿದಂತೆ ಆಯವ್ಯಯದಲ್ಲಿ ಪ್ರಸ್ತಾಪಿಸಬಹುದಾದ ಯೋಜನೆಗಳ ‌ಕುರಿತ ಸಮಗ್ರ ಪ್ರಸ್ತಾವನೆಗಳನ್ನು ಇದೇ ಜನವರಿ 12 ರೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ತಮ್ಮ ಕಚೇರಿಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕೈಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಪ್ಪದೆ ಸಮಗ್ರ ಮಾಹಿತಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳಲ್ಲಿ ಲಭ್ಯವಿರುವ ಬೀಜೋತ್ಪಾದನಾ ಕೇಂದ್ರಗಳಲ್ಲಿ ನವೀನ ತಾಂತ್ರಿಕತೆಗಳನ್ನು ಅಳವಡಿಸಿ ರೈತರಿಗೆ ಪ್ರಚುರಪಡಿಸುವ ನಿಟ್ಟಿನಲ್ಲಿ ಹಾಗೂ ಕೃಷಿ ಸಂಶೋದನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರಕ್ಕೆ ನವೀನ ಕೃಷಿ ತಾಂತ್ರಿಕತೆ ಅಭಿವೃದ್ದಿ ಪಡಿಸಲು ಅವಶ್ಯಕತೆಗಾಗಿ ಬೇಕಾಗುವ ಪ್ರಸ್ತಾವನೆಗಳನ್ನು ಸಹ ಸಲ್ಲಿಸುವಂತೆ ಸಭೆಯಲ್ಲಿದ ಕೃಷಿ ಅಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೊಚಿಸಿದರು.

ಇದಲ್ಲದೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯಿಂದ ಸಹ ಮುಂಬರುವ ಸಾಲಿನಲ್ಲಿ ತೆಗೆದುಕೂಳ್ಳಬಹುದಾದ ಯೋಜನೆಗಳ ಕುರಿತು ವಿವರವಾದ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು.

*ಸಿರಿಧಾನ್ಯ ಮೇಳ:*

ಜನೇವರಿ 26, 27 ಹಾಗೂ 28 ರಂದು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಬೃಹತ ಸಿರಿಧಾನ್ಯ ಮೇಳ, ಫಲಪುಷ್ಪ ಪ್ರದರ್ಶನ, ಸಣ್ಣ ಕೈಗಾರಿಕೆಗಳ ಹಾಗೂ ಸ್ವ ಸಹಾಯ ಸಂಘಗಳ ಮಾರಾಟ ಮೇಳವನ್ನು ಆಯೋಜಿಸಲು‌ ನಿರ್ಧರಿಸಿದ್ದು, ಈ ಕುರಿತು ಸೂಕ್ತ ಸ್ಥಳ ಆಯ್ಕೆ ಮಾಡಿ ಎಲ್ಲಾ ಇಲಾಖೆಗಳಲ್ಲಿ ಲಭ್ಯವಿರುವ ಅನುದಾನ ಒಗ್ಗೂಡಿಸಿ ಹಾಗೂ ಮೇಳಕ್ಕೆ ಅವಶ್ಯವಿರುವ ಅಂದಾಜು ವೆಚ್ಚದ ಮಾಹಿತಿಯನ್ನು ಸಹ ಶುಕ್ರವಾರ ಸಂಜೆ ಒಳಗೆ ಸಲ್ಲಿಸಲು ಸೂಚಿಸಿದರು.

ಸಭೆಯಲ್ಲಿ ಕಲಬುರಗಿ ಸಹಾಯಕ ಆಯುಕ್ತೆ ರೂಪಿಂದರ್ ಕೌರ್, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ, ಕೃಷಿ ಉಪನಿರ್ದೇಶಕಿ ಅನುಸುಯಾ, ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ, ಡಿ.ಐ.ಸಿ. ಜಂಟಿ ನಿರ್ದೇಶಕ ಎಂ.ಸತೀಷಕುಮಾರ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ, ಜಿಲ್ಲಾ ಪಂಚಾಯತಿಯ ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕ ಅಬ್ದುಲ್ ಅಜೀಮ್, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಎಸ್.ಡಿ.ಅವಟಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

38 mins ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

45 mins ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

58 mins ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

1 hour ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

1 hour ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420