ಬಿಸಿ ಬಿಸಿ ಸುದ್ದಿ

ಯುವಕರಿಗೆ ಶಿಕ್ಷಣದ ಕಡೆಗೆ ಪ್ರೋತ್ಸಾಹಿಸುವ ದಿನವೇ ಯುವ ದಿನ

ಕಲಬುರಗಿ: ಭಾರತದಲ್ಲಿನ ಜನರ ಹಕ್ಕುಗಳ ಬಗ್ಗೆ ಜ್ಞಾನವನ್ನು ನೀಡುವ  ಸರಿಯಾಗಿ ನಡೆದುಕೊಳ್ಳಲು ಜನರಿಗೆ ಶಿಕ್ಷಣ ನೀಡುವ ದಿನವೇರಾಷ್ಟ್ರೀಯ ಯುವ ದಿನವಾಗಿದೆ ಎಂದು ಬೀದರ ನಗರದ ಅಕ್ಕ ಮಹಾದೇವಿ ಮಹಿಳಾ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಶಿವಶರಣಪ್ಪ ಹುಗ್ಗೆಪಾಟೀಲ್ ಹೇಳಿದರು.

ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪ್ರತಿಷ್ಠಿತ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯವು ಹಮ್ಮಿಕೊಂಡ ರಾಷ್ಟ್ರೀಯ ಯುವ ದಿನವನ್ನು ಉದ್ಘಾಟಿಸಿ ಮಾತನಾಡಿದರು.

ಯುವಕರನ್ನು ಪ್ರೇರೇಪಿಸುವ ಮತ್ತು ಸ್ವಾಮಿ ವಿವೇಕಾನಂದರ ವಿಚಾರಗಳನ್ನು ಹರಡುವ ಮೂಲಕ ದೇಶಕ್ಕೆ ಉತ್ತಮ ಭವಿಷ್ಯವನ್ನು ರೂಪಿಸುವುದು ಈ ಆಚರಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಯುವ ದಿನದ ಮಹತ್ವವನ್ನು ಹೇಳಿಕೊಟ್ಟರು. ವೇದಿಕೆಯಲ್ಲಿ ಉಪ ಪ್ರಾಚಾರ್ಯರಾದ ಡಾ. ವೀಣಾ ಎಚ., ಶ್ರೀಮತಿ ಉಮಾ ರೇವೂರ್, ಡಾ. ಮಹೇಶ್ ಗಂವ್ಹಾರ, ಡಾ. ರೇಣುಕಾ ಎಚ., ಶ್ರೀಮತಿ ಸುಷ್ಮಾ ಕುಲಕರ್ಣಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕು. ಸುಷ್ಮಾ ಬೇನುರ, ಪ್ರಾರ್ಥನಾ ಗೀತೆಯನ್ನು ಕು. ಸುಮತಿ ಎಸ್., ವಂದನಾರ್ಪಣೆಯನ್ನು ಕು. ರುಚಿಕಾ ಹಂಪ್ಲಿ ಮಾಡಿದರು. ಡಾ. ಮಹೇಶ್ ಗಂವ್ಹಾರ ರವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.

emedialine

Recent Posts

ಹೊಸ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾಧಿಕಾರಿಗಳಿಂದ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ…

11 mins ago

ಫ.ಗು. ಹಳಕಟ್ಟಿ ವಚನ ತವನಿಧಿಯ ಸಂರಕ್ಷಕ: ಬಿ.ಆರ್. ಪಾಟೀಲ

ಕಲಬುರಗಿ: ಮನೆ, ಮಠ, ಜಗುಲಿಗಳಲ್ಲಿ ಪೂಜಿಸುತ್ತಿದ್ದ ತಾಡೋಲೆಗಳನ್ನು ಹೆಕ್ಕಿ ತೆಗೆದ ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ಮುಖ್ಯಮಂತ್ರಿಗಳ…

21 mins ago

ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಕಲಬುರಗಿ: ಸ್ಥಳೀಯ ಕೆಬಿಎನ್ ವಿವಿಯ ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನವನ್ನು ಆಚರಿಸಲಾಯಿತು. ರೇಡಿಯೋ ಡಿಗ್ನೋಸಿಸ ವಿಭಾಗದ ಮಾಜಿ ಮುಖಸ್ಥ ಡಾ.…

25 mins ago

ಈಡಿಗ ನಿಗಮ ಅನುದಾನಕ್ಕೆ ವಿಧಾನಸಭೆಯಲ್ಲಿ ಧ್ವನಿಯಾಗುವೆ: ಶಾಸಕ ಗವಿಯಪ್ಪ

ಕಲಬುರಗಿ : ರಾಜ್ಯದ ಈಡಿಗ ಬಿಲ್ಲವ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ಘೋಷಣೆ ಮಾಡಿದ ಬ್ರಹ್ಮಶ್ರೀ ನಾರಾಯಣ…

28 mins ago

ಕಲ್ಯಾಣ ಕರ್ನಾಟಕದ 18 ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ: ಡಾ. ಅಜುಸಿಂಗ್

ಕಲಬುರಗಿ: ಕಂದಾಯ ಇಲಾಖೆಯ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ನೂತನ 18 ತಾಲೂಕು ಕೇಂದ್ರಗಳಲ್ಲಿ ಆಡಳಿತ ವಿಧಾನಸೌಧಗಳನ್ನು ನಿರ್ಮಿಸಲು ತಲಾ…

31 mins ago

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

4 hours ago