ಅಖಿಲಭಾರತ ಶಿವಾನುಭವ ಮಂಟಪದಲ್ಲಿ ಲಿಂಗೈಕ್ಯ ಪೂಜ್ಯ ದೊಡ್ಡಪ್ಪ ಅಪ್ಪ ಅವರ 36ನೇ ಪುಣ್ಯಸ್ಮರಣೋತ್ಸವ

0
63

ಕಲಬುರಗಿ: ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಅಖಿಲಭಾರತ ಶಿವಾನುಭವ ಮಂಟಪ, ಶರಣಬಸವೇಶ್ವರ ಸಂಸ್ಥಾನದ ಅಡಿಯಲ್ಲಿ ಲಿಂಗೈಕ್ಯ ಪೂಜ್ಯ ದೊಡ್ಡಪ್ಪ ಅಪ್ಪ ಅವರ 36ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಅವರ ಶಿವ-ಜೀವನವನ್ನು ಕುರಿತು ಅಂತಿಮ ಸುತ್ತಿನ ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಗಿತ್ತು.

ಸಂಗೀತ ವಿಭಾಗದ ಪ್ರಾಧ್ಯಾಪಕರಾದ ಡಾ.ಛಾಯಾ ಭರತನೂರ ಅವರ ಪ್ರಾರ್ಥನಾಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಅಖಿಲಭಾರತ ಶಿವಾನುಭವ ಮಂಟಪದ ಸಂಚಾಲಕರಾದ ಡಾ. ಶಿವರಾಜ ಶಾಸ್ತ್ರಿ ಹೇರೂರ್ ಅವರು ಈ ಕಾರ್ಯಕ್ರಮದ ನೇತ್ರತ್ವ ವಹಿಸಿ ಸರ್ವರನ್ನು ಸ್ವಾಗತಿಸಿದರು. ಗೌರವ ಅತಿಥಿಗಳಾಗಿ ಆಗಮಿಸಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ್ ಅವರು ಮಾತನಾಡುತ್ತ, ಲಿಂಗೈಕ್ಯ ಪೂಜ್ಯ ದೊಡ್ಡಪ್ಪ ಅವರು ”ನುಡಿದಂತೆ ಎಲ್ಲವೂ ನಡೆಯುತಿತ್ತು,” ಇದು ಸಿದ್ದಿ ಸಾಧಿಸಿದವರಿಗೆ ಮಾತ್ರ ಸಾದ್ಯವೆಂದು, ಅವರ ಎಂಭತ್ತು ವರ್ಷಗಳ ಆಧ್ಯಾತ್ಮಿಕ ಮತ್ತು ಲೌಕಿಕ ಜೀವನದ ಸಾರ್ಥಕ ಬದುಕಿನ ಬಗ್ಗೆ ವಿವರಿಸಿದರು.

Contact Your\'s Advertisement; 9902492681

ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಅನಿಲಕುಮಾರ ಬಿಡವೆ ಮತ್ತು ಮೌಲ್ಯ ಮಾಪನ ಕುಲಸಚಿವರಾದ ಡಾ. ಲಿಂಗರಾಜ ಶಾಸ್ತ್ರಿಯವರು ಅಂತಿಮ ಸುತ್ತಿನ ಸ್ಪರ್ಧೆಯ ತಿರ್ಪುಗಾರರಾಗಿ ಉಪಸ್ಥಿತರಿದ್ದರು.

ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಡಿ.ಟಿ.ಅಂಗಡಿ ಅವರು, ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಲಿಂಗೈಕ್ಯ ಪೂಜ್ಯ ದೊಡ್ಡಪ್ಪ ಅವರು ಅಂದು ಬಿತ್ತಿದ ಜ್ಙಾನ ದಾಸೋಹ ಬೀಜ ಇಂದು ಹೆಮ್ಮರವಾಗಿ ಬೆಳೆದು ಎಂಭತ್ತು ವಿದ್ಯಾಲಯಗಳಿಗಿಂತ ಹೆಚ್ಚಿನ ವಿದ್ಯಾಲಯ,  ಮತ್ತು ಮಹಾವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರಂತರವಾಗಿ ಜ್ಙಾನ ದಾಸೋಹ ಮಾಡುತ್ತ ಪೂಜ್ಯ ದೊಡ್ಡಪ್ಪ  ಅಪ್ಪ ಅವರು ಜ್ಙಾನಪ್ರಸಾದದ ರೂಪದಲ್ಲಿ ಇಂದಿಗೂ ಕ್ರಿಯಾಶೀಲರಾಗಿದ್ದಾರೆ ಅದೇ ರೀತಿ ಸುಮಾರು ಮೂವತ್ತು ಸಾವಿರಕಿಂತ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು ರಾಜ್ಯ, ರಾಷ್ಟ್ರ ಹಾಗೂ ಅಂತರ್‌ರಾಷ್ಟೀಯ ಮಟ್ಟದಲ್ಲಿ ಅನೇಕ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು ಈ ಸಂಸ್ಥೆಯನ್ನು ಹಾಗೂ ಪೂಜ್ಯ ದೊಡ್ಡಪ್ಪ  ಅಪ್ಪ ಅವರನ್ನು ಇಂದಿಗೂ ಸ್ಮರಿಸುವಂತಾಗಿದೆ. ಪ್ರಸ್ತುತ ಪೀಠಾಧಿಪತಿಗಳಾಗಿರುವ ಪರಮ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ನಿರಂತರವಾಗಿ ಶಿಕ್ಷಣಕ್ಕೆ ಹೆಚ್ಚು ಪ್ರೊತ್ಸಾಹ ನೀಡುತ್ತ

ಈ ಭಾಗದಲ್ಲಿ ಪ್ರಪ್ರಮಥಮವಾಗಿ ಖಾಸಗಿ ವಿಶ್ವವಿದ್ಯಾಲಯ ಸ್ಥಾಪಿಸಿ, ಶರಣಬಸವ ವಿಶ್ವವಿದ್ಯಾಲಯದ ನಿರ್ಮಾತ್ರು ಆಗಿದ್ದಾರೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ಧಾರೆ ಅಂತರ್‌ರಾಷ್ಟೀಯ ಮಟ್ಟದಲ್ಲಿ ಉನ್ನತ ಶಿಕ್ಷಣಕ್ಕೆ  ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಿದ್ದಾರೆ. ಈ ಶುಭ ಸಂಧರ್ಭದಲ್ಲಿ ದೊಡ್ಡಪ್ಪ ಅವರ ೩೬ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ನಮ್ಮ ಮಹಾವಿದ್ಯಾಲಯದಲ್ಲಿ ಅಂತಿಮ ಸುತ್ತನ ಭಾಷಣ ಸ್ಪರ್ಧೆ ಹಮ್ಮಿಕೊಂಡಿದ್ದು ಸಂತೋಷವಾಗಿದೆ ಎಂದು ಹರ್ಷ ವ್ಯಕ್ತ ಪಡಿಸಿದರು.

ಶಿಕ್ಷಣ ಶಾಸ್ತ್ರದ ಪ್ರಾಧ್ಯಾಪಕರಾದ ಪ್ರೋ.ಶರಣಮ್ಮ ವಾರದ್ ಕಾರ್ಯಕ್ರಮ ನಿರೂಪಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here