ಸ್ವಾಮಿಜೀ ಸಂದೇಶ ಸಾಧನೆಗೆ ಸಾಕ್ಷಿ: ಯಾರಿ

ವಾಡಿ: ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಸಂದೇಶ ಎಲ್ಲರ ಸಾಧನೆಯ ಬದುಕಿಗೆ ಪ್ರೇರಣದಾಯಕ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು.

ಪಟ್ಟಣದ ಬಿಜಿಪಿ ಪಕ್ಷದ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ದೇಶವನ್ನು ಮುನ್ನಡೆಸಲು ಸಶಕ್ತವಾದ ಯುವಪಡೆ ಜಾಗೃತ ಗೊಳಿಸುವುದೆ ನನ್ನ ಗುರಿ ಎನ್ನುತ್ತಿದ್ದ ಸ್ವಾಮಿಜೀ ಅವರು ಮಾನಸಿಕ, ದೈಹಿಕ, ಅಧ್ಯಾತ್ಮಿಕ, ನೈತಿಕ, ಸಾಮಾಜಿಕವಾಗಿ ಎಂದೂ ಶಕ್ತಿ ಕಳೆದುಕೊಳ್ಳಬಾರದೆಂದು ಯುವಕರಿಗೆ ಕರೆ ನೀಡಿದನ್ನು ಅವರ ವಾಣಿಯಲ್ಲಿ ಕಾಣಬಹುದು. ಅವರ ಸಂದೇಶ ನಾವೆಲ್ಲರೂ ಅಳವಡಿಸಿಕೊಂಡಾಗ ಮಾತ್ರ ಭಾರತೀಯ ಸಂಸ್ಕೃತಿಯನ್ನು ಉಳಿಸಿ, ಬೆಳಸಿ, ಉತ್ತುಂಗಕ್ಕೆ ಕೊಂಡೊಯ್ಯುವುದಕ್ಕೆ ಸಾಧ್ಯವಾಗುತ್ತದೆ.

ಸೆಪ್ಟೆಂಬರ್ 11, 1893 ರಂದು ಅಮೆರಿಕದಲ್ಲಿ ನನ್ನ ಸಹೋದರ ಸಹೋದರಿಯರೇ ಎಂದು ಹೇಳುತ್ತಾ ಜಗತ್ತಿನ ಮನಸೆಳೆದರು. ಅವರು ನಮ್ಮ ತಾಯ್ನಾಡಿನ ವೇದಾಂತದ, ಆಧ್ಯಾತ್ಮಿತದ ತತ್ವಗಳ ಬಗ್ಗೆ ಎಲ್ಲರೂ ಬೇರಗಾಗುವಂತೆ ಭಾರತದ ಹಿರಿಮೆಯನ್ನು ಸಾರಿದರು.

ಮಾನವೀಯತೆ ಮತ್ತು ಸಹೋದರತ್ವದ ಭಾವನೆಯಿಂದ ಬದುಕುವುದನ್ನು ಕಲಿಸಿದರು. ಹೀಗಾಗಿ ನಾವೆಲ್ಲರೂ ಅವರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅನುಸರಿಸಿ ಉತ್ತಮ ಕಾರ್ಯಗಳನ್ನು ಮಾಡೋಣ. ಹಾಗೆಯೇ ಅವರ ಸಂದೇಶವನ್ನು ಎಲ್ಲರಿಗೂ ಸಾರೋಣ ಎಂದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್ ಸಿ ಮೂರ್ಚಾ ತಾಲ್ಲೂಕು ಅಧ್ಯಕ್ಷ ರಾಜು ಮುಕ್ಕಣ್ಣ, ಯುವ ಮೂರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಕಾರ್ಯದರ್ಶಿ ಅರ್ಜುನ ದಹಿಹಂಡೆ. ಮುಖಂಡರಾದ ಸಿದ್ದಣ್ಣ ಕಲ್ಲಶೆಟ್ಟಿ, ರಾಮಚಂದ್ರ ರಡ್ಡಿ,ಅರ್ಜುನ ಕಾಳೆಕರ, ಭೀಮರಾವ ದೊರೆ, ಶರಣಗೌಡ ಚಾಮನೂರ,ಅಶೋಕ ಹರನಾಳ,ಹರಿ ಗಲಾಂಡೆ. ಸ್ಯಾಮಸನ್ ರಡ್ಡಿ,ಶಿವಶಂಕರ ಕಾಶೆಟ್ಟಿ, ಚನ್ನಯ್ಯ ಸ್ವಾಮಿ,ಬಸವರಾಜ ಕಿರಣಗಿ,ಕಿಶನ ಜಾಧವ, ದತ್ತಾ ಖೈರೆ,ಸತೀಶ ಸಾವಳಗಿ, ನಿರ್ಮಲ ಇಂಡಿ,ಯಂಕಮ್ಮ ಗೌಡಗಾಂವ, ಉಮಾದೇವಿ ಗೌಳಿ, ಅನುಸುಬಾಯಿ ಪವಾರ,ಶರಮ್ಮ ಯಾದಗಿರ,ದೆವಕ್ಕಿ ಪುಜಾರಿ, ಪ್ರೇಮ ರಾಠೋಡ,ಅಯ್ಯಣ್ಣ ದಂಡೋತಿ, ಮಹೇಂದ್ರ ಕುಮಾರ ಪುಜಾರಿ,ಬಾಬು ಕುಡಿ,ವಿಶ್ವರಾಧ್ಯ ತಳವಾರ, ಬಸವರಾಜ ಪಗಡಿಕರ್, ಪರಮೇಶ್ವರ ಚೊಪಡೆ, ಮಲ್ಲಿಕಾರ್ಜುನ ಸಾತಖೇಡ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

6 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

9 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

13 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

14 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

16 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420