ಕಲಬುರಗಿ : ಯಾವುದೇ ಒಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಅಲ್ಲಿನ ಯುವಕರ ಪಾತ್ರ ತುಂಬಾ ಪ್ರಮುಖವಾಗಿದೆ. ಇಡೀ ಯುವ ಸಮೂಹದ ಚೇತನಾ ಶಕ್ತಿಯಾದ ವಿವೇಕಾನಂದ ಅವರು ನೀಡಿದ ಸಂದೇಶವನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯವಿದೆ ಎಂದು ನ್ಯಾಯವಾದಿ ಬಿ.ಎಸ್.ಕಂದಗಲ್ ಹೇಳಿದರು.
ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಶುಕ್ರÀವಾರ ಏರ್ಪಡಿಲಾಗಿದ್ದ ‘ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆಯಾದ-ರಾಷ್ಟ್ರೀಯ ಯುವ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ತಾಲೂಕಾ ವಕೀಲರ ಸಂಘದ ಅಧ್ಯಕ್ಷ ಎಂ.ಐ.ಸೂಗೂರ್, ನ್ಯಾಯವಾದಿ ಎಸ್.ಬಿ.ಯಂಕಂಚಿ ಮಾತನಾಡಿ, ಯುವಕರು ಹೇಡಿಗಳಾಗಬಾರದು ಪುರುಷ ಸಿಂಹಗಳಾಗಬೇಕು, ನೀವು ಎಂದೂ ಪರಾವಲಂಬಿಗಳಾಗಬಾರದು, ನಿಮ್ಮ ಬದುಕಿನ ಶಿಲ್ಪಿಗಳು ನೀವೇ ಎಂದು ಪ್ರತಿಪಾದಿಸುತ್ತಿದ್ದ ಸ್ವಾಮಿ ವಿವೇಕಾನಂದರು, ಯುವ ಜನರಿಗೆ ನೀಡಿರುವ ಒಂದೊಂದು ಸಂದೇಶವೂ ಒಂದೊಂದು ಜೀವನ ಧರ್ಮವಾಗಿದೆ. ಹೀಗಾಗಿಯೇ ಸ್ವಾಮಿ ವಿವೇಕಾನಂದರ ಹೆಸರು ಕೇಳಿದರೆ, ಅಕ್ಷರಶಃ ರೋಮಾಂಚನವಾಗುತ್ತದೆ. ಯುವಕರು ವಿವೇಕವಾಣಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡಬೇಕಾಗಿದೆ ಎಂದು ಮಾರ್ಮಿಕವಾಗಿ ನುಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಬಿ.ಎನ್.ಕೊಂಬಿನ್, ವಕೀಲರಾದ ಪರಶುರಾಮ ಬಿ.ಮುದಬಾಳ, ಶಿವಕುಮಾರ ಪಿ.ಕೂಡಚಿ, ಮೊಹ್ಮದ್ ಮನ್ಸೂರ್ ಅಹ್ಮದ್, ರಾಜಶೇಖರ ಸರಕಾರ್, ಕಾಲೇಜಿನ ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕ ಮಲ್ಲಿಕಾರ್ಜುನ ದೊಡ್ಡಮನಿ, ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ ಹುಣಚಿರಾಯ ನಾಟಿಕಾರ್, ಶ್ರೀಕಾಂತ ವೇದಿಕೆ ಮೇಲಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…