ಬಿಸಿ ಬಿಸಿ ಸುದ್ದಿ

ಮನೋವಿಕಾರದ ಶಿಕ್ಷಣಕ್ಕಿಂತ ಮನೋವಿಕಾಸದ ಶಿಕ್ಷಣ ಅಗತ್ಯ

ಕಲಬುರಗಿ: ಹೆಣ್ಣು, ಹೊನ್ನು, ಮಣ್ಣಿನ ಬೆನ್ನು ಹತ್ತಿದ ಜಗತ್ತು ಇಂದು ಶ್ರೀಮಂತರಾಗಬೇಕು ಎಂಬ ಸ್ಪರ್ಧೆಯಲ್ಲಿದೆ. ಆದರೆ ಅಲ್ಲಮಪ್ರಭುದೇವರ ನಿಜ ಸಂಪತ್ತು ಹೊನ್ನು, ಹೆಣ್ಣು, ಮಣ್ಣು ಅಲ್ಲ. ಜ್ಞಾನ ನಿಜವಾದ ಸಂಪತ್ತು ಎಂದು ಪತ್ರಕರ್ತ- ಲೇಖಕ ಡಾ. ಶಿವರಂಜನ ಸತ್ಯಂಪೇಟೆ ಅಭಿಪ್ರಾಯಪಟ್ಟರು.

ನಗರದ ಭೋಗೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಲ ಬದಲಾದಂತೆ ಮೌಲ್ಯಗಳು ಸಹ ಬದಲಾಗುತ್ತವೆ. ಒಂದು ಕಾಲದ ಮೌಲ್ಯ ಇನ್ನೊಂದು ಕಾಲಕ್ಕೆ ಅಪಮೌಲ್ಯವಾಗುತ್ತವೆ ಎಂದು ಹೇಳಿದರು.

ಒಂದು ಕಾಲದಲ್ಲಿ ಗುಣವೇ ಮೌಲ್ಯವಾಗಿದ್ದಿತು. ಆದರೆ ಇಂದು ಹಣವೇ ಮೌಲ್ಯವಾಗುತ್ತಿದೆ. ಬಸವಾದಿ ಶರಣರು ಮೌಲ್ಯಗಳಿಗಾಗಿಯೇ ಬದುಕಿದವರು. ಅವರ ಜೀವನಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ವಿವರಿಸಿದರು.

ಓದಿ ಪದವಿ ಪಡೆಯುವುದೇ ನಿಜವಾದ ಶಿಕ್ಷಣವಲ್ಲ. ಓದಿದ, ಕೇಳಿದ ಫಲ ಬದುಕಿನಲ್ಲಿ ಕಾಣಬೇಕು. ಮನೋವಿಕಾರದ ಶಿಕ್ಷಣಕ್ಕಿಂತ ಮನೋವಿಕಾಸದ ಶಿಕ್ಷಣ ಅಗತ್ಯ ಎಂದು ಅವರು ಪ್ರತಿಪಾದಿಸಿದರು.

ಶಾಲೆಯ ಮುಖ್ಯಗುರು ಮಹಾಂತೇಶ ಬಿರಾದರ ಮಾತನಾಡಿ, ಸ್ವಾಮಿ ವಿವೇಕಾನಂದರ ಕ್ರೀಯಾಶೀಲ ಬದುಕನ್ನು ಅಳವಡಿಸಿಕೊಳ್ಳುವ ಮೂಲಕ ಬದುಕಿಗೆ ಬೆಲೆ ತಂದುಕೊಳ್ಳಬೇಕು ಎಂದು ಕರೆ ನೀಡಿದರು.

ಸಿದ್ಧಗಂಗಾ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಲಕ್ಷ್ಮೀಪುತ್ರ ರಾಂಪುರೆ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲೆಯ ಮುಖ್ಯಗುರು ಗುಂಡಪ್ಪ ಚಿಂಚೋಳಿ, ಶಿಕ್ಷಕ ಎನ್.ಬಿ. ಬಾವಿಕಟ್ಟಿ ವೇದಿಕೆಯಲ್ಲಿದ್ದರು.

ಶರಣರು ಒತ್ತು ಕೊಟ್ಟಿದ್ದು ಆಂತರಿಕ ಶಿಕ್ಷಣಕ್ಕೆ. ಅದಕ್ಕಾಗಿ ಅವರು ಶಾಲಾ- ಕಾಲೇಜುಗಳನ್ನು ತೆರೆಯಲಿಲ್ಲ. ಬದಲಾಗಿ ಅನುಭವ ಮಂಟಪ ಪ್ರಾರಂಭಿಸಿದರು. ಇಂದಿನ ದಾವಂತದ ಬದುಕಿಗೆ ಶರಣರ ವಚನಗಳು ದಿವ್ಯ ಔಷಧಿಗಳಾಗಿವೆ. – ಡಾ. ಶಿವರಂಜನ ಸತ್ಯಂಪೇಟೆ, ಕಲಬುರಗಿ

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago