ಗ್ರಾಮೀಣ ನಾಟಕಗಳು ಕಲಾವಿದರ ಸೃಷ್ಟಿಗೆ ಕಾರಣವಾಗಿದೆ

ಸುರಪುರ: ತಾಲ್ಲೂಕಿನ ಟಿ. ಬೊಮ್ಮನಹಳ್ಳಿ ಗ್ರಾಮದಲ್ಲಿ ಮೂಕನಾಯಕ ಸಾಂಸ್ಕøತಿಕ ಕಲಾ ನಾಟ್ಯ ಸಂಘ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಮಲ್ಲೇಶ ಕೋನ್ಹಾಳ ಅವರು ಬರೆದ ‘ಸಾವು ಬಂದರೂ ಸೆರಗು ಹಾಸಲಾರೆ ಎಂಬ ಸಗರನಾಡು ಗ್ರಾಮೀಣ ನಾಟಕೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ ಮಾತನಾಡಿ, ಈ ಭಾಗದಲ್ಲಿ ಹಾಸುಹೊಕ್ಕಾಗಿರುವ ಗ್ರಾಮೀಣ ನಾಟಕಗಳು ಕಲಾವಿದರ ಸೃಷ್ಟಿಗೆ ಕಾರಣವಾಗಿವೆ. ಇಲ್ಲಿನ ರಂಗ ಕಲಾವಿದರುÀ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸುವಷ್ಟು ಪ್ರೌಢಿಮೆ ಹೊಂದಿದ್ದಾರೆ ನಮ್ಮಲ್ಲಿ ನಾಟಕ ಸಾಹಿತಿಗಳು, ರಂಗ ನಟರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರಿಗೆ ಪ್ರೋತ್ಸಾಹದ ಅವಶ್ಯಕತೆ ಇದೆ. ಸುರಪುರ ನಗರದಲ್ಲಿ ರಂಗ ಮಂದಿರ ನಿರ್ಮಿಸಬೇಕು. ಕನ್ನಡ ಸಂಸ್ಕøತಿ ಇಲಾಖೆ ಗ್ರಾಮೀಣ ನಾಟಕಗಳಿಗೆ ಪ್ರತ್ಯೇಕ ಧನ ಸಹಾಯ ನೀಡಬೇಕು. ಈ ದಿಸೆಯಲ್ಲಿ ತಾವು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಶೋಷಿತರ ಸಂಘಟನೆಗಳ ಒಕ್ಕೂಟದ ರಾಜ್ಯ ಸಮಿತಿ ಅಧ್ಯಕ್ಷ ವೆಂಕೋಬ ದೊರೆ ಅಧ್ಯಕ್ಷತೆ ವಹಿಸಿದ್ದರು. ಸಕ್ರೆಪ್ಪ ಮುತ್ಯಾ ದೇವರಗೋನಾಲ ಸಾನಿಧ್ಯ ವಹಿಸಿದ್ದರು. ತಹಶೀಲ್ದಾರ್ ಕೆ. ವಿಜಯಕುಮಾರ, ಮುಖಂಡರಾದ ಬಲಭೀಮನಾಯಕ ಭೈರಿಮರಡಿ, ಶಿವರಾಜನಾಯಕ ನಾಯ್ಕೋಡಿ, ಭೀಮರಾಯ ಮೂಲಿಮನಿ, ಶಿವರಾಯ ಕಾಡ್ಲೂರ, ಯಲ್ಲಪ್ಪನಾಯಕ ಮಲ್ಲಿಭಾವಿ, ನಾಗಪ್ಪ ಕನ್ನೆಳ್ಳಿ, ಸಣ್ಣದೇಸಾಯಿ ದೇವರಗೋನಾಲ, ರವಿನಾಯಕ ಭೈರಿಮರಡಿ, ಕಾಳಪ್ಪ ಕವಾತಿ, ದೇವಿಂದ್ರಪ್ಪ ಬಾದ್ಯಾಪುರ ಇದ್ದರು.

ಸಂಘದ ಅಧ್ಯಕ್ಷ ಮಲ್ಲೇಶ ಕೋನ್ಹಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೂರ್ತಿ ಬೊಮ್ಮನಳ್ಳಿ, ಮುತ್ತು ಬಳಗಾನೂರ, ಭೀಮಾಶಂಕರ ಹಲಕರ್ಟಿ, ಬಲಭೀಮ ದೇವಡಿ, ಕೃಷ್ಣ ಹೀರಾಪುರ, ಮೌನೇಶ ದಳಪತಿ, ಸಿದ್ದಣ್ಣ ಶಾರದಳ್ಳಿ, ಶಿವುಮಾನಯ್ಯ ವಾಗಣಗೇರಾ, ಭವಾನಿ ಬೆಂಗಳೂರು, ಸೀಮಾ ಮಹಿಂದ್ರಗಿ, ರಂಜಿತಾ ದುಧನಿ, ಪ್ರಿಯಾಂಕಾ ಹಿರಿಯೂರ ಅವರು ಅದ್ಭುತವಾಗಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420