ಶ್ರಾವಣ ಮಾಸದ ಮುಕ್ತಾಯ ಅಂಗವಾಗಿ ಪ್ರತಿಭಾ ಪುರಸ್ಕಾರ, ಹೊಲಿಗೆ ಯಂತ್ರ ವಿತರಣೆ ಮತ್ತು ಪಲ್ಲಕ್ಕಿ ಮಹೋತ್ಸವ

ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಂಪೂರದ ಶ್ರೀ ಜಡೆಶಂಕರಲಿಂಗ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮುಕ್ತಾಯ ಕಾರ್ಯಕ್ರಮದ ಅಂಗವಾಗಿ ಸೆ. 8 ರಂದು ಪ್ರತಿಭಾ ಪುರಸ್ಕಾರ, ಹೊಲಿಗೆ ಯಂತ್ರ ವಿತರಣೆ ಹಾಗೂ ಹಾಗೂ ೯ರಂದು ಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೆ.೮ರಂದು ಬೆಳಿಗ್ಗೆ ೧೧.೩೦ಕ್ಕೆ ನಡೆಯುವ ಪ್ರತಿಭಾ ಪುರಸ್ಕಾರ, ಸಮಾಜದ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ, ಶಾಲಾ ಮಕ್ಳಳಿಗೆ ಸ್ಕೂಲ್ ಬ್ಯಾಗ್ ವಿತರಣೆ ಕಾರ್ಯಕ್ರಮದ ಸಾನಿಧ್ಯವನ್ನು ಗುರುಬಸವ ಬೃಹನ್ಮಠದ ಶ್ರೀ ಶಿವಾನಂದ ಮಹಾಸ್ವಾಮಿಜಿ ವಹಿಸುವರು. ಪಾಳಾ ಮೂಲಕಟ್ಟಿಮನಿ ಹಿರೇಮಠದ ಶ್ರೀ ಡಾ.ಗುರುಮೂರ್ತಿ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಹೈ.ಕ.ಶಿ. ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ್ ಬಿಲಗುಂದಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ, ಕಲಬುರಗಿ ಸಹಕಾರ ಇಲಾಖೆಯ ಉಪನಿರ್ದೇಶಕ ವಿಶ್ವನಾಥ ಮಲಕೂಡ, ಭೂದಾಖಲೆಗಳ ಉಪನಿರ್ದೇಶಕ ಶಂಕರ ಬಸವರಾಜ ಖಾದಿ, ತಹಶೀಲ್ದಾರ್ ಜಗನ್ನಾಥ ಪೂಜಾರಿ, ವಿಜಯಕುಮಾರ್ ಜಿ.ಕಮರಡಗಿ, ಧೂಳಪ್ಪ ಗುರುಪಾದಪ್ಪ ಕೋಳಕೂರ, ಶಾಂತವೀರಪ್ಪ ಕಲ್ಯಾಣಿ, ಚಂದ್ರಶೇಖರ್ ಧನಶೆಟ್ಟಿ, ಅಶೋಕ ದೊಡ್ಡಮನಿ, ವಿನೋದಕುಮಾರ್ ಎಸ್,ಮೇಲಕೇರಿ ಆಗಮಿಸುವರು. ಇದೇ ಸಂದರ್ಭದಲ್ಲಿ ದಾನಿಗಳಿಗೆ ಸನ್ಮಾನಿಸಲಾಗುತ್ತದೆ. ಕಾರ್ಯಕ್ರಮದ ನಂತರ ಮಹಾಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ೮.೩೦ರಿಂದ ಬೆಳಗಿನ ಜಾವದವರೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ.

ಸೆ.೯ರಂದು ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೭ ಗಂಟೆವರೆಗೆ ಬ್ಯಾಂಡ್, ವಾಧ್ಯವೈಭವಗಳೊಂದಿಗೆ ನಗರದ ಮುಖ್ಯ ಬೀದಿಗಳಲ್ಲಿ ಶ್ರೀ ಜಡೆ ಶಂಕರಲಿಂಗ ದೇವರ ಪಲ್ಲಕ್ಕಿ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವ ಮೂಲಕ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಬಣಗಾರ ಸಮಾಜದ ಅಧ್ಯಕ್ಷ ಅಶೋಕ ಎನ್.ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ವಿನೋದಕುಮಾರ್ ಮೇಲಕೇರಿ ಅವರು ಮನವಿ ಮಾಡಿದ್ದಾರೆ.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420