ಬಿಸಿ ಬಿಸಿ ಸುದ್ದಿ

ಜ. 18, 19ರಂದು ವಿಟಿಯು ಟೆಕ್ನೊ-ಕಲ್ಚರಲ್ ಫೆಸ್ಟ್

ಕಲಬುರಗಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ನ ಸ್ನಾತಕೋತ್ತರ ಕೇಂದ್ರ, ಪ್ರಾದೇಶಿಕ ಕಚೇರಿಯಲಿ ಜ. 18 ಮತ್ತು 19ರಂದು ಎರಡು ದಿನಗಳ ಕಾಲ ಪ್ರಾದೇಶಿಕ ತಾಂತ್ರಿಕ-ಸಾಂಸ್ಕೃತಿಕ ಉತ್ಸವ (ರಿಜನಲ್ ಟೆಕ್ನೊ-ಕಲ್ಚರಲ್ ಫೆಸ್ಟ್) ಅತ್ಯಂತ ವೈವಿಧ್ಯಮದಿಂದ ಆಯೋಜನೆ ಮಾಡಲಾಗುತ್ತಿದೆ ಎಂದು ವಿಟಿಯು ಪ್ರಾದೇಶಿಕ ಕೇಂದ್ರದ ನಿರ್ದೇಶಕ ರಾದ ಪೆÇ್ರ. ಬಸವರಾಜ ಗಾದಗೆ ತಿಳಿಸಿದರು.

ಯುಕ್ತಿ-2024ರ ಘೋಷವಾಕ್ಯದಡಿ ನಡೆಯಲಿರುವ ಎರಡು ದಿನಗಳ ಈ ಉತ್ಸವದಲ್ಲಿ ಹಲವು ವೈವಿಧ್ಯಮಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಗರದ ಕುಸನೂರ ರಸ್ತೆಯಲ್ಲಿರುವ ವಿಟಿಯು ಪ್ರಾದೇಶಿಕ ಕೇಂದ್ರದ ವಿಶಾಲ ಆವರಣದಲ್ಲಿ ಬೃಹತ್ ವೇದಿಕೆಯನ್ನು ಸಿದ್ಧಪಡಿಸಲಾಗುತ್ತಿದೆ. ವಿಟಿಯು ಕುಲಪತಿ ಡಾ. ಎಸ್.ವಿದ್ಯಾಶಂಕರ್ ಅವರ ಮಾರ್ಗದರ್ಶನದಲ್ಲಿ ಪ್ರಾದೇಶಿಕ ಕೇಂದ್ರದ ತಂಡ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ ಎಂದು ಅವರು ತಿಳಿಸಿದರು.

ಈ ಹಬ್ಬದ ಪ್ರಯುಕ್ತ ಮಂಥನ, ಚಿತ್ರಕಲೆ, ಕ್ರೀಡಾರತ್ನ, ಮನೋರಂಜನೆ, ಸಾಂಸ್ಕøತಿಕ ಸ್ಭೆರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ವಿವಿಧ ವಿಶ್ವವಿದ್ಯಾಲಯಗಳು, ಇಂಜನೀಯರಿಂಗ್ ಕಾಲೇಜುಗಳು ಹಾಗೂ ಅಲವಾರು ಶಿಕ್ಷಣ ಸಂಸ್ಥೆಗಳು ಇದಕ್ಕೆ ಸಹಕಾರ, ಸಹಯೋಗ, ಸಹಭಾಗಿತ್ವ ನೀಡಿ ಈ ಉತ್ಸವದಲ್ಲಿ ಉತ್ಸುಕತೆಯಿಂದ ಭಾಗವಗಿಸಲಿವೆ. ಈ ಸ್ಪರ್ಧೆಗಳಲ್ಲಿ ವಿಜೇತರಾದರಿಗೆ ನಗದು ಬಹುಮಾನ ನೀಡಲಾಗುತ್ತಿದೆ ಎಂದು ವಿವರಿಸಿದರು.

ಜ.18 ರಂದು ಬೆಳಗ್ಗೆ 9.30ಕ್ಕೆ ರೀಜನಲ್ ಟೆಕ್ನೊ-ಕಲ್ಚರಲ್ ಫೆಸ್ ಉದ್ಘಾಟನೆ ನಡೆಯಲಿದೆ. ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ ಗೌರವಾನ್ವಿತ ಸದಸ್ಯರಾದ ನಿವೃತ್ತ ಡಿಜಿಪಿ ರಾಘವೇಂದ್ರ ಔರಾದಕರ್ ಅವರ ಸಮ್ಮುಖದಲ್ಲಿ ಉದ್ಘಾಟನೆ ಜರುಗಲಿದ್ದು, ಕೆಕೆಆರ್‍ಡಿಬಿ ಕಾರ್ಯದರ್ಶಿಗಲಾದ ಸುಂದರೇಶ ಬಾಬು, ಪ್ರಸಾರ ಭಾರತಿ ಎಡಿಜಿ ಸುನಿಲ್ ಜಂಟಿಯಾಗಿ ಉದ್ಘಾಟನೆ ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾದಿಕಾರಿಗಳಾದ ಬಿ. ಫೌಜಿಯಾ ತರನ್ನುಮ್, ನಗರ ಪೆÇಲೀಸ್ ಆಯುಕ್ತ ಆರ್. ಚೇತನ್, ಅತಿಥಿಗಳಾಗಿ ಅರಣ್ಯಾದಿಕಾರಿ ಸುಮೀತಕುಮಾರ ಎಸ್. ಪಾಟೀಲ್ ಪಾಲ್ಗೊಳ್ಳಲಿದ್ದಾರೆ. ವಿಟಿಯು ಕುಲಪತಿ ಡಾ. ವಿದ್ಯಾಶಂಕರ ಅಧ್ಯಕ್ಷತೆ ವಹಿಸಲಿದ್ದಾರೆಂದು ವಿವರಿಸಿದರು.

ಜ.19 ರಂದು ಸಂಜೆ ಉತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಣಿ ಎಸ್. ಅಪ್ಪ ಹಾಗೂ ಹಜರತ್ ಖ್ವಾಜಾ ಬಂದೇ ನವಾಜ್ ವಿಶ್ವವಿದ್ಯಾಲಯದ ಕುಲಪತಿಗಳಾದ ಹಜರತ್ ಡಾ. ಸೈಯದ್ ಶಹಾ ಖುಸ್ರೋ ಹುಸೇನಿ ಅವರು ಸಾನಿಧ್ಯವನ್ನು ವಹಿಸಲಿದ್ದಾರೆ. ಕೆಕೆಆರ್‍ಡಿಬಿ ಅಧ್ಯಕ್ಷ, ಶಾಸಕ ಡಾ. ಅಜಯಸಿಂಗ್ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತಿಮಾ, ಬಸವರಾಜ ಮತ್ತಿಮುಡು ಬಾಗವಹಿಸಲಿದ್ದಾರೆ. ಅತಿಥಿಗಳಾಗಿ ಈ ಭಾಗದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಪ್ರಮುಖರಾದ ಡಾ. ಬೀಮಾಶಂಕರ ಬಿಲಗುಂದಿ, ಎಸ್.ಆರ್. ರೆಡ್ಡಿ, ಸಾಗರ್ ಈಶ್ವರ ಖಂಡ್ರೆ, ದೀಲೀಪಕುಮಾರ ತಾಳಂಪಳ್ಳಿ, ಬಸವರಾಜ ಪಾಟೀಲ್ ಅಟ್ಟೂರ್, ಉದಯಶಂಕರ ಶೆಟ್ಟಿ, ಡಾ. ಉಮಾತಾಯಿ ದೇಶಮುಖ, ರಾಜೇಂದ್ರ ರೆಡ್ಡಿ, ಡಾ. ಯಶವಂತ ಭೂಪಾಲ ಸೇರಿದಂತೆ ಹಲವರು ಪಾಲೊಳ್ಳುವರು ಎಂದು ವಿವರಿಸಿದರು.

ಡಾ. ಶಂಭುಲಿಂಗಪ್ಪ, ಪೆÇ್ರ. ವಿರೇಶ ಪೂಜಾರಿ, ಡಾ. ಬ್ರಿಜಭೋಷಣ, ಪೆÇ್ರ.ಅಂರೀಶ ಭದ್ರಶೆಟ್ಟಿ ಅವರು ಸೇರಿದಂತೆ ಇನ್ನಿತರರಿದ್ದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

1 hour ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago