20 ರಂದು ಕೇಂದ್ರ ಸರಕಾರದ ಭೂತ ದಹನ ಚಳುವಳಿ

ಭಾವನಾತ್ಮಕ ರಾಜಕಾರಣ ಸಾಕು; ಜನರ ಬದುಕು ಕಟ್ಟುವ ರಾಜಕಾರಣ ಬೇಕು

ಕಲಬುರಗಿ: ರಾಮ ಮಂದಿರ ವಿಷಯದಲ್ಲಿ ಕೇಂದ್ರ ಸರ್ಕಾರ ನಡೆಸುತ್ತಿ ರುವ ಭಾವನಾತ್ಮಕ ರಾಜಕಾರಣವನ್ನು ಕೈಬಿಟ್ಟು ಜನರ ಬದುಕು ಕಟ್ಟುವ ರಾಜಕಾರಣ ಮಾಡಬೇಕೆಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಮಂಡಳಿಯ ಕರೆಯ ಮೇರೆಗೆ ಜ. 20ರಂದು ರಾಜ್ಯಾದ್ಯಂತ ಸರಕಾರದ ಭೂತದಹನ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶ ರಾಠೋಡ ತಿಳಿಸಿದರು.

ನಗರದ ಜಿಲ್ಲಾದಿಕಾರಿಗಳ ಕಚೇರಿ ಮುಂದೆ ಕೇಂದ್ರ ಸರಕಾರದ ಭೂತದಹನ ಮಾಡುವ ಮೂಲಕ ಕೇಂದ್ರ ಸರಕಾರದ ವೈಫಲ್ಯಗಳು ಮತ್ತು ಸದ್ಯ ನಡೆಸುತ್ತಿರುವ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದು ಇಂತಹ ಭಾವನಾತ್ಮಕ ರಾಜಕಾರಣ ಬದಲಿಗೆ ಜನರ ಬದುಕು ಕೊಡುವ ನಿಟ್ಟಿನಲ್ಲಿ ಮುಂಬರುವ ಬಜೆಟ್‍ನಲ್ಲಿ ವಿವಿಧ ಬೇಡಿಕೆಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಲಾಗುವುದೆಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪಕ್ಷದ ಪ್ರಮುಖ ಬೇಡಿಕೆಗಳಾದ ಬರಗಾಲ ಪರಿಹಾರ, ಕೇಂದ್ರ ಸರಕಾರವು ರಾಜ್ಯ ಸರಕಾರ ಸಲ್ಲಿಸಿರುವ 18,171ಕೋಟಿ ರೂಪಾಯಿಗಳನ್ನು ರಾಷ್ಟ್ರೀಯ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಬೇಕು, ಮನರೇಗಾ ಯೋಜನೆಯಡಿ ದಿನಗೂಲಿ 200ದಿನಗಳಿಗೆ ಏರಿಸಿ ಕೂಲಿಯನ್ನು 600ಗಳಿಗೆ ಹೆಚ್ಚಿಸಬೇಕು, ರಾಜ್ಯದಲ್ಲಿರುವ 27ಲಕ್ಷ ಕುಟುಂಬಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು, ಕಾಪೆರ್Çೀರೆಟ್ ಪರ ಕಾರ್ಮಿಕ ಕಾಯ್ದೆಯಲ್ಲಿ 8ಗಂಟೆಯಿಂದ 12ಗಂಟೆಗೆ ಕೆಲಸದ ಅವಧಿ ಹೆಚ್ಚಿಸಿದ್ದು ಹಿಂಪಡೆಯಬೇಕು ಮತ್ತು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅದಿಕಾರಕ್ಕೆ ಬಂದರೆ 6ನೇಯ ಗ್ಯಾರಂಟಿಯಾಗಿ ಅಕ್ಷರ ದಾಸೋಹ, ಬಿಸಿಂiÀೂಟ, ಹಾಗೂ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವುದಾಗಿ ಪ್ರಚಾರದ ವೇಳೆ ಪ್ರಿಯಂಕಾ ಗಾಂಧಿ ಆಶ್ವಾಸನೆ ನೀಡಿದ್ದರು. ಅದನ್ನು ಈಡೇರಿಸುವುದು ಸೇರಿದಂತೆ ಹಲವಾರು ಬೇಡಿ ಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಸಿಪಿಐ ರಾಜ್ಯ ಮಂಡಳಿ ಸದಸ್ಯ ಮೌಲಾಮುಲ್ಲಾ, ಭೀಮಾಶಂಕರ ಮಾಡಿಯಾಳ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420