ಹೈದರಾಬಾದ್ ಕರ್ನಾಟಕ

ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೆ ಕಸಾಪ ಧ್ವನಿಯಾಗಲಿ: ಸವದಿ

ಕಲಬುರಗಿ: ಇಂದಿನ ಸಮಾಜದಲ್ಲಿ ಅನೇಕರು ನಾನಾ ರೀತಿಯ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಧ್ವನಿ ಕಳೆದುಕೊಂಡಿರುವ ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವುಗಳಿಗೆ ಪರಿಷತ್ತು ಧ್ವನಿಯಾಗಿ ಕಾರ್ಯನಿರ್ವಹಿಸಲಿ. ಆಗ ತಾನಾಗಿಯೇ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳೂ ಆದ ಶಾಸಕ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟರು.

ನಗರದ ಕನ್ನಡ ಭವನಕ್ಕೆ ಬುಧವಾರ ಭೆಟ್ಟಿ ನೀಡಿ ಜಿಲ್ಲಾ ಕಸಾಪ ಹಾಗೂ ಜಿಲ್ಲಾ ಗಾಣಿಗ ಸಮಾಜದ ವತಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ದೇಶದಲ್ಲಿ ದಿನೇ ದಿನೇ ಅತ್ಯಾಚಾರ, ಭ್ರಷ್ಟಾಚಾರ, ಅನಾಚಾರ ಮುಂತಾದ ಘೋರ ಘಟನೆಗಳು ಹೆಚ್ಚುತ್ತಿದ್ದರೂ ಪ್ರಜೆಗಳಾದ ನಾವು ಏನು ಮಾಡುತ್ತಿದ್ದೇವೆ ಎಂಬ ಪ್ರಶ್ನೆ ನಾವೇ ಹಾಕಿಕೊಳ್ಳಬೇಕು. ಇದಕ್ಕೆ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ನಾವು ವಿಚಾರಶೀಲತೆ ಬೆಳೆಸಿಕೊಳ್ಳಬೇಕಾಗಿದೆ. ಆ ಮೂಲಕ ಈ ದೇಶದ ಸಂಸ್ಕøತಿಯ ರಕ್ಷಣೆಗೆ ಇಂದು ಪ್ರತಿಯೊಬ್ಬರೂ ಮುಂದಾಗಬೇಕಿದೆ ಎಂದ ಅವರು, ಈ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಿನಕ್ಕೊಂದು ಹೊಸ ಆವಿಷ್ಕಾರದೊಂದಿಗೆ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಮನದುಂಬಿ ಮಾತನಾಡಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಪರಿಷತ್ತು ಕಳೆದ ಎರಡು ವರ್ಷಗಳಿಂದ ಸಾಹಿತ್ಯಕ ಚಟುವಟಿಕೆಗಳ ಜತೆಗೆ ಜನಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತಾ ಬರಲಾಗುತ್ತಿದೆ. ಸಂಗೀತ, ಸಾಹಿತ್ಯ, ಕಲೆ ಹೀಗೆ ವಿವಿಧ ಕ್ಷೇತ್ರದ ಪ್ರತಿಭಾವಂತರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕಲಬುರಗಿ ಜಿಲ್ಲೆ ವೈಶಿಷ್ಟ್ಯ ಹತ್ತು ಹಲವು ಸಾಂಸ್ಕøತಿಕವಾಗಿ, ಸಾಹಿತ್ಯಿಕವಾಗಿ ಪುರಾತನ ಕಾಲದಿಂದಲೂ ಕನ್ನಡ ನಾಡಿನ ಮೇಲೆ ತನ್ನದೇ ಆದ ಪ್ರಭಾವ ಬೀರಿದೆ. ಕನ್ನಡ ಸಾಹಿತ್ಯಕ್ಕೆ ಮೊಟ್ಟ ಮೊದಲ ಕನ್ನಡದ ಕೃತಿ ಶ್ರೀವಿಜಯನ `ಕವಿರಾಜಮಾರ್ಗ’ ಕೃತಿ ಕೊಟ್ಟ ನೆಲ ಇದಾಗಿದೆ. ಭವ್ಯ ಪರಂಪರೆ ಹೊಂದಿರುವ ಈ ನೆಲದ ಪರಿಚಯವನ್ನು ಹೊಸ ಪೀಳಿಗೆಗೆ ಮಾಡಿಸುವ ನಿಟ್ಟಿನಲ್ಲಿ ಪರಿಷತ್ತು ಕ್ರಿಯಾಶೀಲವಾಗಿದೆ ಎಂದರು.

ಜಿಲ್ಲಾ ಗಾಣಿಗ ನೌಕರರ ಸಂಘದ ಅಧ್ಯಕ್ಷ ಸಂಗಣ್ಣಗೌಡ ಪಾಟೀಲ ಕಲ್ಲೂರ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಪ್ರಮುಖರಾದ ಡಾ. ಬಾಬುರಾವ ಶೇರಿಕಾರ, ಶರಣರಾಜ್ ಛಪ್ಪರಬಂದಿ, ರಾಜೇಂದ್ರ ಮಾಡಬೂಳ, ಜ್ಯೋತಿ ಕೋಟನೂರ್, ಡಾ. ಕೆ ಎಸ್ ಬಂಧು, ಪ್ರೊ. ಬಿ.ಎ.ಪಾಟೀಲ ಮಹಾಗಾಂವ, ಸುರೇಶ ಪಾಟೀಲ ನೇದಲಗಿ, ವೀರೇಶ ಕಲಶೆಟ್ಟಿ, ಸುಮಾ ಕವಾಲ್ದಾರ್, ರಾಜೇಶ್ವರಿ ಸಾಹು, ಶ್ರೀದೇವಿ ಕೋರೆ, ಸಂದೀಪ ಭರಣಿ, ಡಿ.ಪಿ.ಸಜ್ಜನ್, ಸಂತೋಷ ಕುಡಳ್ಳಿ, ಶಿವಕುಮಾರ ಸಿ.ಹೆಚ್., ಪ್ರಭವ ಪಟ್ಟಣಕರ್, ಚಂದ್ರಶೇಖರ ಮ್ಯಾಳಗಿ, ಸೋಮಶೇಖರಯ್ಯಾ ಹೊಸಮಠ, ಬಸಯ್ಯಾ ಸ್ವಾಮಿ, ರೇವಣಸಿದ್ದಪ್ಪ ಜೀವಣಗಿ, ರಾಜಶೇಖರ ಯಂಕಂಚಿ, ಅರವಿಂದ ಚವ್ಹಾಣ, ಶಿವಕುಮಾರ ಬಾಳಿ, ಸೋಮಶೇಖರ ಹಿರೇಮಠ, ಬಂಗಾರಪ್ಪÀ ಬಿ ಆಡಿನ್, ಬಿ.ಎಂ.ಪಾಟೀಲ ಕಲ್ಲೂರ, ರವಿಕುಮಾರ ಶಹಾಪುರಕರ್, ಮಲ್ಲಿಕಾರ್ಜುನ ಇಬ್ರಾಹಿಂಪುರ, ಚಂದ್ರಶೇಖರ ಪಾಟೀಲ ಯಳಸಂಗಿ, ಸಂದೀಪ ದೇಸಾಯಿ, ಶರಣಪ್ಪ ಅಂದಾನಿ, ಈರಣ್ಣಾ ಕೌಲಗಿ, ಡಾ. ರೆಹಮಾನ್ ಪಟೇಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

18 mins ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

3 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

3 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

3 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

3 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

3 hours ago