ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕಕ್ಕೆ ಆದ ಅನ್ಯಾಯ ಸರಿಪಡಿಸಿ: ಅಟ್ಟೂರ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹಲವಾರು ಯೋಜನೆಗಳು ಕೈ ತಪ್ಪಿ ಹೋದರು ಬರುವ ದಿನಗಳಲ್ಲಿ ಅಭಿವೃದ್ಧಿ ಆಗಬಹುದೆಂಬ ನಿರೀಕ್ಷೆಯಲ್ಲಿದ್ದ  ಜನರಿಗೆ  ನಿರಾಸೆಯಾಗಿ ಮತ್ತೆ ಮಲತಾಯಿ ಧೋರಣೆ ಮುಂದುವರೆದಿರುವುದಕ್ಕೆ ಜನಪರ ಹೋರಾಟಗಾರ ನ್ಯಾಯವಾದಿ ಹಣಮಂತರಾಯ ಎಸ್ ಅಟ್ಟೂರ ಕಳವಳ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರೂ ಯೋಜನೆಗಳು ವರ್ಗಾವಣೆ ಆಗಿರುವುದು ಹಾಗೂ ಮರಳಿ ಹೋಗಿರುವುದು ಈ ಭಾಗದ ರಾಜಕೀಯ ಧುರಣರ ಅಭಿವೃದ್ಧಿ ಮಾಡಬೇಕೆನ್ನುವ ಇಚ್ಚಾ  ಶಕ್ತಿಯ ಕೊರತೆ ಕಾರಣವಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಅನೇಕ ನೀರಾವರಿ ಯೋಜನೆಗಳು ಬೇರೆ ಕಡೆ ವರ್ಗಾವಣೆ ಮಾಡಿ ಅಭಿವೃದ್ಧಿ ಕುಂಠಿತ ಆಗಿರುವುದಲ್ಲದೆ ಈ ಭಾಗದ ಹಲವಾರು ಜನರು ಉದ್ಯೋಗ ಕಳೆದುಕೊಂಡು ಕಂಗಾಲಗಿದ್ದಾರೆ. ಇತ್ತೀಚಿಗೆ ಕರ್ನಾಟಕ ರಾಜ್ಯದಲ್ಲಿ ಆಯಾ ಭಾಗದ ಅಭಿವೃದ್ಧಿಗಾಗಿ ಗಣ್ಯರ ಹೆಸರಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಒಟ್ಟು 27 ಪ್ರತಿಷ್ಠಾನ ಸ್ಥಾಪಿಸಿದ್ದಾರೆ, ಆದರೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದು ಪ್ರತಿಷ್ಠಾನ ಇಲ್ಲದಿರುವುದು ದುರದೃಷ್ಟಕರ ಸಂಗತಿ. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣವಾದರೆ ಹೇಗೆ ? ಈ ನಾಡಿನಲ್ಲಿ ಸಾಹಿತ್ಯ, ಕಲೆ, ಸಂಗೀತ, ಜಾನಪದ ಉಳಿಸಿ ಬೆಳೆಸುವುದು ಸರಕಾರದ ಕರ್ತವ್ಯವಾಗಿದೆ.

ಕನ್ನಡ ಸಾಹಿತ್ಯದ ಎರಡು ಕಣ್ಣುಗಳಾದ ದಾಸ ಸಾಹಿತ್ಯ ಹಾಗೂ ವಚನ ಸಾಹಿತ್ಯ ಹುಟ್ಟಿದ್ದೆ ಕಲ್ಯಾಣ ಕರ್ನಾಟಕ ಭಾಗದಲ್ಲಿ. ತತ್ವಪದಕಾರರು ಜನಿಸಿ ತತ್ವಪದಗಳು ರಚಿಸಿ ಕನ್ನಡ ನಾಡಿಗೆ ಕೊಡುಗೆ ನೀಡಿದ ಪವಿತ್ರ ನೆಲವಿದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ವಚನ ಸಾಹಿತ್ಯ, ದಾಸ ಸಾಹಿತ್ಯ, ಜನಪದ ಸಾಹಿತ್ಯ, ಸಂಗೀತದೊಂದಿಗೆ ಹಲವಾರು ಜನರು ಸೇವೆಗೈದು ಕಲ್ಯಾಣ ಕರ್ನಾಟಕ ಭಾಗವೆ ಜಗತ್ತಿಗೆ ಪರಿಚಯಿಸಿದ್ದಾರೆ.

ಮರಾಠಿ, ಉರ್ದು, ತೆಲಗು ಭಾಷೆಗಳ ಪ್ರಭಾವದ ಪರಿಸ್ಥಿತಿಯಲ್ಲಿಯು ಈ ಭಾಗದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲಾಗಿದೆ. ನಿಜಾಮನ ಆಳ್ವಿಕೆ ಕಾಲದಲ್ಲಿ ಹೊರಗಡೆ ಉರ್ದು ಬೋರ್ಡ್ ಹಾಕಿಕೊಂಡು ಒಳಗಡೆ ಕನ್ನಡ ಪಾಠ ಮಾಡುವ ಕನ್ನಡ ನಾಡಿಗೆ ಅದೆಂತಹ ಕೊಡುಗೆ ನೀಡಿದೆ ಎಂಬುದನ್ನು ಆಳುವ ಸರ್ಕಾರ ಅರಿತುಕೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗದ ಜನರ ತಾಳ್ಮೆಯನ್ನು ಸರಕಾರ ಪರೀಕ್ಷಿಸದೆ ಆದಂತಹ ಅನ್ಯಾಯ ಸರಿಪಡಿಸಿ ನ್ಯಾಯ ದೊರಕಿಸಿ ಕೊಡಬೇಕು ಹಾಗೂ ಈ ಭಾಗ ಅಭಿವೃದ್ಧಿಗೊಳಿಸಬೇಕೆಂದು ಒತ್ತಾಯಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

10 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

10 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

12 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

12 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

12 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

13 hours ago