ಸುರಪುರ:ಕೇಂದ್ರ ಸರಕಾರ ಜಾರಿಗೊಳಿಸಲು ಮುಂದಾಗಿರುವ ಹಿಟ್ ಆಂಡ್ ರನ್ ಘಟನೆಯ ಕುರಿತಾದ ಕಾನೂನು ರದ್ದುಗೊಳಿಸಲು ಆಗ್ರಹಿಸಿ ಯಾದಗಿರಿ ಲಾರಿ ಮಾಲಿಕರ ಸಂಘದ ತಾಲೂಕು ಘಟಕದ ಮುಖಂಡರು ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಕೇಂದ್ರ ಸರಕಾರ ಹಿಟ್ ಆಂಡ್ ರನ್ ಘಟನೆ ಸಂದರ್ಭದಲ್ಲಿ ಚಾಲಕನಿಗೆ 7 ಲಕ್ಷ ದಂಡ ಹಾಗೂ 10 ವರ್ಷಗಳ ಜೈಲು ವಾಸದ ಶಿಕ್ಷೆ ನೀಡುವ ಕಾನೂನು ಜಾರಿಗೊಳಿಸಲು ಮುಂದಾಗಿರುವುದು ಚಾಲಕರ ಪಾಲಿಗೆ ಮರಣ ಶಾಸನವಾಗಿದೆ,ಇದರಿಂದ ದೇಶದಲ್ಲಿನ ಎಲ್ಲಾ ಚಾಲಕರು ವೃತ್ತಿಯನ್ನು ನಿಲ್ಲಿಸುವ ಸ್ಥಿತಿ ನಿರ್ಮಾಣವಾಗಿದೆ,ಯಾವುದೇ ಚಾಲಕ ಉದ್ದೇಶಪೂರ್ವಕವಾಗಿ ಅಪಘಾತ ಮಾಡುವುದಿಲ್ಲ,ಸರಕಾರ ಇದನ್ನು ಅರ್ಥ ಮಾಡಿಕೊಳ್ಳದೆ ಇಂತಹ ಕಠಿಣ ಕಾನೂನು ಜಾರಿಗೊಳಿಸಲು ಮುಂದಾಗಿ ಚಾಲಕರ ಬದುಕನ್ನೆ ಮೂರಾಬಟ್ಟೆ ಮಾಡುತ್ತಿದೆ,ಕೂಡಲೇ ಕಾನೂನು ರದ್ದುಗೊಳಿಸಬೇಕು ಇಲ್ಲವಾದಲ್ಲಿ ಮತ್ತಷ್ಟು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಬರೆದ ಮನವಿಯನ್ನು ತಹಸೀಲ್ದಾರ್ ಕೆ.ವಿಜಯಕುಮಾರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಅಬ್ದುಲ್ ಖಾದರ್ ಸೌದಾಗರ್, ಮುಖಂಡರಾದ ಮಂಜುನಾಥ ಧರಣಿ,ಸಾಹೇಬಗೌಡ ಕುಂಬಾರ,ರಂಗನಾಥ ಶಹಾಪುರಕರ್,ಸಂತೋಷ ಬಡಿಗೇರ,ಯಲ್ಲೇಶ ನಾಯಕ,ವಿಶ್ವನಾಥ ಕೊಡೇಕಲ್,ವಿನೋದ ಆವಂಟಿ,ಕಾಶಿಮ ಶಾರದಳ್ಳಿ,ದಾವುದ್ ಪಠಾಣ್, ಪ್ರವೀಣ ಲಕ್ಷ್ಮೀಪುರ,ಆನಂದ ಸಿದ್ದಾಪುರ,ಬಸವರಾಜ ಬುದ್ದಿನ್,ಯಲ್ಲಪ್ಪ ಹುಜರತಿ,ರಾಘು ಹುಜರತಿ,ಪಿಡ್ಡಪ್ಪ ಹಳಿಸಗರ,ಬಾಲುಗೌಡ,ಅವಿನಾಶ,ಶೇಖರಣ್ಣ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…
ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…
ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…