ಕಲಬುರಗಿ: ವಿಶ್ವಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡುವ ಮೂಲಕ ಕರ್ನಾಟಕದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಪಸರಿಸಿದ ಮಹಾಮಾನವತವಾದಿ ಬಸವೇಶ್ವರ ಅವರನ್ನು ‘ಕರ್ನಾಟಕದ ಸಾಂಸ್ಕøತಿಕ ನಾಯಕ’ ಎಂದು ರಾಜ್ಯ ಸರ್ಕಾರ ಗುರುವಾರ ಕ್ಯಾಬಿನೇಟ್ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಇಲ್ಲಿನ ‘ಬಸವೇಶ್ವರ ಸಮಾಜ ಸೇವಾ ಬಳಗ’ ತೀರ್ವ ಹರ್ಷ ವ್ಯಕ್ತಪಡಿಸಿ, ಸರ್ಕಾರಕ್ಕೆ ಅಭಿನಂದನೆ ಮತ್ತು ಅನಂತ ಧನ್ಯವಾದಗಳನ್ನು ಸಲ್ಲಿಸಿತು.
ನಗರದ ಖಾದ್ರಿ ಚೌಕ್ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ಬಳಗದ ವತಿಯಿಂದ ಗುರುವಾರ ಸಂಜೆ ಜರುಗಿದ ಸಂಭ್ರಮಾಚಾರಣೆಯ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸಿ, ಸಿಹಿ ವಿತರಣೆ ಮಾಡಲಾಯಿತು.
ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ ಮತ್ತು ಡಿಡಿಪಿಐ ಕಚೇರಿಯ ಇಂಗ್ಲೀಷ್ ವಿಷಯ ಪರಿವೀಕ್ಷಕ ಕರಬಸಯ್ಯ ಮಠ ಮಾತನಾಡಿ, ಈ ಘೋಷಣೆ ಸಮಸ್ತ ಕನ್ನಡಿಗರೆಲ್ಲರಿಗೂ ಅತ್ಯಂತ ಸಂತೋಷದ ವಿಷಯವಾಗಿದೆ. ಶ್ರೇಷ್ಠ ಸಮಾಜ ಸುಧಾರಕ ಬಸವೇಶ್ವರರಿಗೆ ಮತ್ತು ಶರಣ ತತ್ವಕ್ಕೆ ನೀಡಿದ ಗೌರವವಾಗಿದೆ ಎಂದು ಬಸವಣ್ಣನವರ ಅವಿಸ್ಮರಣೀಯ ಕೊಡುಗೆಯನ್ನು ವಿದ್ಯಾರ್ಥಿಗಳಿಗೆ ಮನೋಜ್ಞವಾಗಿ ವಿವರಿಸಿದರು.
ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಪ್ರಮುಖರಾದ ರಾಜಶೇಖರ ಮೆಟೆಕಾರ್, ಬಸಯ್ಯಸ್ವಾಮಿ ಹೊದಲೂರ, ಶಿವಯೋಗೆಪ್ಪಾ ಎಸ್.ಬಿರಾದಾರ, ಶಾಂತಪ್ಪಗೌಡ್ ಮಾಲಿಪಾಟೀಲ್ ಕೋಗನೂರ್, ದೇವೇಂದ್ರಪ್ಪ ಗಣಮುಖಿ, ಸೈಯದ್ ಹಮೀದ್ ಹುಸೇನ್, ಸೋಹೆಲ್ ಶೇಖ್, ಸಮೀರ್ ಮುಜಾವರ್, ವಿನಾಯಕ ಹಿರೇಮಠ, ಆದರ್ಶ ತಿವಾರಿ, ಶಿವಕುಮಾರ ಕಂಠಿಕಾರ, ಸುಲೇಮಾನ್ ಶೇಖ್ ಹಾಗೂ ವಿದ್ಯಾರ್ಥಿಗಳಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…