ಆಧಾರ್‍ಕಾರ್ಡ್ ಮಿಸ್ ಮ್ಯಾಚ್‍ದಿಂದ 1,566 ಫಲಾನುಭವಿಗಳ ಪಿಂಚಣಿ ಸ್ಥಗಿತ: ದಾಖಲೆಗಳನ್ನು ಸಲ್ಲಿಸಲು ಸೂಚನೆ

ಕಲಬುರಗಿ: ಸಾಮಾಜಿಕ ಭದ್ರತಾ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ ಅನುμÁ್ಠನಗೊಳಿಸುತ್ತಿರುವ ಮಾಸಿಕ ಪಿಂಚಣಿ ಯೋಜನೆಗಳಾದ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ ಹಾಗೂ ರೈತ ವಿಧವಾ ವೇತನ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಆದೇಶದಲ್ಲಿರುವ ಹಾಗೂ ಬ್ಯಾಂಕ್ ಖಾತೆಯಲ್ಲಿರುವ ಆಧಾರ್ ಕಾರ್ಡ್‍ಗೂ ಮಿಸ್ ಮ್ಯಾಚ್ ಆಗಿರುವ ಪ್ರಯುಕ್ತ ಒಟ್ಟು 1,566 ಫಲಾನುಭವಿಗಳ ಪಿಂಚಣಿಯು ಸ್ಥಗಿತಗೊಂಡಿರುತ್ತದೆ ಎಂದು ಕಲಬುರಗಿ ತಹಶೀಲ್ದಾರರು ತಿಳಿಸಿದ್ದಾರೆ.

ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಆದೇಶದಲ್ಲಿರುವ ಹಾಗೂ ಬ್ಯಾಂಕ ಖಾತೆಯಲ್ಲಿರುವ ಆಧಾರ ಕಾರ್ಡಗೂ ಮ್ಯಾಚ್ ಆಗಿರುವುದರಿಂದ ಅವರಾದ (ಬಿ)-136, ಫರಹತಾಬಾದ-133, ಕಲಬುರಗಿ ಗ್ರಾಮೀಣ-47, ಕಲಬುರಗಿ ನಗರ-1155, ಪಟ್ಟಣ-93 ಸೇರಿದಂತೆ ಒಟ್ಟು 1,566 ಫಲಾನುಭವಿಗಳ ಪಿಂಚಣಿಯು ಸ್ಥಗಿತಗೊಂಡಿರುತ್ತದೆ.

ಸ್ಥಗಿತಗೊಂಡ ಮೇಲ್ಕಂಡ ಫಲಾನುಭವಿಗಳ ಪಿಂಚಣಿಯನ್ನು ಪರಿಶೀಲಿಸಿ ಪುನಃ ಜಾರಿಗೊಳಿಸಲು ಕಲಬುರಗಿ ಹೋಬಳಿಯ ನಗರ ಮತ್ತು ಕಲಬುರಗಿ ತಾಲೂಕಿನ ಎಲ್ಲಾ ಹೋಬಳಿಯ ಫಲಾನುಭವಿಗಳು ತಮ್ಮ ಪಿಂಚಣಿಯ ಆದೇಶದ ಪ್ರತಿ, ಬ್ಯಾಂಕ್ ಖಾತೆಯ ಪುಸ್ತಕ ಹಾಗೂ ಆಧಾರ ಕಾರ್ಡ ದಾಖಲೆಗಳೊಂದಿಗೆ ಕಲಬುರಗಿ ತಹಶೀಲ್ದಾರರ ಕಚೇರಿಯಲ್ಲಿ 2024ರ ಜನವರಿ ಅಂತ್ಯದೊಳಗಾಗಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

55 mins ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

1 hour ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

1 hour ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

1 hour ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

1 hour ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420