ಶಹಾಪುರ: ಮಾನವತಾವಾದಿ ಬಸವಣ್ಣನವರನ್ನು ಕರ್ನಾಟಕ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಹೆಮ್ಮೆಯ ಸಂಗತಿ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಡಾ.ರವೀಂದ್ರನಾಥ ಹೊಸ್ಮನಿ ಹೇಳಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡ ಸರ್ಕಾರಕ್ಕೆ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಸವಣ್ಣನವರು ಸರ್ವ ಸಮುದಾಯದ ಮಾಹಾನ್ ಚೇತನರಾಗಿದ್ದಾರೆ, ಅವರ ಸಮಾನತೆಯ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ತುಂಬಾ ಅಗತ್ಯವಾಗಿವೆ. ಬಸವಣ್ಣನವರ ಮನುಷ್ಯಪರ, ಜೀವಪರ ಶ್ರೇಷ್ಠ ಚಿಂತನೆಗಳ ಆಶಯಗಳ ನೆಲೆಯಲ್ಲಿ ಸರ್ಕಾರ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.
ಲೇಖಕ ವಿಶ್ವರಾಧ್ಯ ಸತ್ಯಂಪೇಟ, ಹಿರಿಯ ಸಾಹಿತಿ ಶಿವಣ್ಣ ಇಜೇರಿ, ಪ್ರಗತಿಪರ ಚಿಂತಕ ನೀಲಕಂಠ ಬಡಿಗೇರ, ಲಕ್ಷ್ಮಣ ಲಾಳಸೇರಿ, ಹಿರಿಯ ಸಾಹಿತಿ ಗುರುಬಸಯ್ಯ ಗದ್ದುಗೆ, ಸಿದ್ದಲಿಂಗಣ್ಣ ಆನೆಗುಂದಿ, ಸೈಯದ್ ಖಾಲಿದ್, ಹೊನ್ನಪ್ಪ ರಸ್ತಾಪುರ, ಬಸವರಾಜ ಆನೆಗುಂದಿ, ಅಮೃತರಾವ್ ಮುಲಗೆ, ಪ್ರಕಾಶ, ಮಾಪಣ್ಣ ಮದ್ರಿಕಿ, ನಾಗಣ್ಣ ಬಡಿಗೇರ, ಸಾಯಬಣ್ಣ ಪುರ್ಲೆ, ಹೊನ್ನಪ್ಪ ಗಂಗನಾಳ, ಸುರೇಶ ಅರುಣಿ, ಮರೆಪ್ಪ ಮುಂಡಾಸ್, ಶರಣಬಸವ ಪೋಲಿಸ್ ಬಿರಾದಾರ, ಮಡಿವಾಳಪ್ಪ ಪಾಟೀಲ್, ದೇವಿಂದ್ರಪ್ಪ ಮಡಿವಾಳಕರ್, ಭೀಮಣ್ಣಗೌಡ ಬಿರಾದಾರ, ನಿಂಗಣ್ಣ ನಾಟೇಕರ್ ತಿಪ್ಪನಳ್ಳಿ, , ತಿಪ್ಪಣ್ಣ ಕ್ಯಾತನಾಳ, ಶರಣು ನಾಯ್ಕೊಡಿ, ಶರಣರಡ್ಡಿ ಹತ್ತಿಗೂಡೂರ, ಮರೆಪ್ಪ ಜಾಲಿಮಂಚಿ, ಗುರುಲಿಂಗಪ್ಪ ಸಾಗರ್ ಮುಂತಾದವರು ಬಸವಣ್ಣನವರು ಬದುಕು ಮತ್ತು ಚಿಂತನೆಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.
ಎಲ್ಲ ಸಮುದಾಯಗಳ ಮುಖಂಡರು ಸೇರಿ ವಿಶ್ವಗುರು ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…