ಬಿಸಿ ಬಿಸಿ ಸುದ್ದಿ

ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ; ಹೆಮ್ಮೆಯ ಸಂಗತಿ ಡಾ. ಹೊಸ್ಮನಿ

ಶಹಾಪುರ: ಮಾನವತಾವಾದಿ ಬಸವಣ್ಣನವರನ್ನು ಕರ್ನಾಟಕ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಹೆಮ್ಮೆಯ ಸಂಗತಿ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಡಾ.ರವೀಂದ್ರನಾಥ ಹೊಸ್ಮನಿ ಹೇಳಿದರು.

ನಗರದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡ ಸರ್ಕಾರಕ್ಕೆ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಸವಣ್ಣನವರು ಸರ್ವ ಸಮುದಾಯದ ಮಾಹಾನ್ ಚೇತನರಾಗಿದ್ದಾರೆ, ಅವರ ಸಮಾನತೆಯ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ತುಂಬಾ ಅಗತ್ಯವಾಗಿವೆ. ಬಸವಣ್ಣನವರ ಮನುಷ್ಯಪರ, ಜೀವಪರ ಶ್ರೇಷ್ಠ ಚಿಂತನೆಗಳ ಆಶಯಗಳ ನೆಲೆಯಲ್ಲಿ ಸರ್ಕಾರ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ಲೇಖಕ ವಿಶ್ವರಾಧ್ಯ ಸತ್ಯಂಪೇಟ, ಹಿರಿಯ ಸಾಹಿತಿ ಶಿವಣ್ಣ ಇಜೇರಿ, ಪ್ರಗತಿಪರ ಚಿಂತಕ ನೀಲಕಂಠ ಬಡಿಗೇರ, ಲಕ್ಷ್ಮಣ ಲಾಳಸೇರಿ, ಹಿರಿಯ ಸಾಹಿತಿ ಗುರುಬಸಯ್ಯ ಗದ್ದುಗೆ, ಸಿದ್ದಲಿಂಗಣ್ಣ ಆನೆಗುಂದಿ, ಸೈಯದ್ ಖಾಲಿದ್, ಹೊನ್ನಪ್ಪ ರಸ್ತಾಪುರ, ಬಸವರಾಜ ಆನೆಗುಂದಿ, ಅಮೃತರಾವ್ ಮುಲಗೆ, ಪ್ರಕಾಶ, ಮಾಪಣ್ಣ ಮದ್ರಿಕಿ, ನಾಗಣ್ಣ ಬಡಿಗೇರ, ಸಾಯಬಣ್ಣ ಪುರ್ಲೆ, ಹೊನ್ನಪ್ಪ ಗಂಗನಾಳ, ಸುರೇಶ ಅರುಣಿ, ಮರೆಪ್ಪ ಮುಂಡಾಸ್, ಶರಣಬಸವ ಪೋಲಿಸ್ ಬಿರಾದಾರ, ಮಡಿವಾಳಪ್ಪ ಪಾಟೀಲ್, ದೇವಿಂದ್ರಪ್ಪ ಮಡಿವಾಳಕರ್, ಭೀಮಣ್ಣಗೌಡ ಬಿರಾದಾರ, ನಿಂಗಣ್ಣ ನಾಟೇಕರ್ ತಿಪ್ಪನಳ್ಳಿ, , ತಿಪ್ಪಣ್ಣ ಕ್ಯಾತನಾಳ, ಶರಣು ನಾಯ್ಕೊಡಿ, ಶರಣರಡ್ಡಿ ಹತ್ತಿಗೂಡೂರ, ಮರೆಪ್ಪ ಜಾಲಿಮಂಚಿ, ಗುರುಲಿಂಗಪ್ಪ ಸಾಗರ್ ಮುಂತಾದವರು ಬಸವಣ್ಣನವರು ಬದುಕು ಮತ್ತು ಚಿಂತನೆಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.

ಎಲ್ಲ ಸಮುದಾಯಗಳ ಮುಖಂಡರು ಸೇರಿ ವಿಶ್ವಗುರು ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

49 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

1 hour ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago