ಅನುಭವ ಮಂಟಪ ಜಗತ್ತಿನ ಮೊದಲ ಸೌಹಾರ್ದ ಕೇಂದ್ರ

ಕಲಬುರಗಿ: 12ನೇ ಶತಮಾನದಲ್ಲಿ ಬಸವಾದಿ ಶರಣರ ನೇತೃತ್ವದಲ್ಲಿ ಸ್ಥಾಪಿಸಲಾಗಿರುವ ಅನುಭವ ಮಂಟಪ ಜಗತ್ತಿನ ಮೊಟ್ಟ ಮೊದಲ ಸೌಹಾರ್ದ ಕೇಂದ್ರವಾಗಿತ್ತು ಎಂದು ಸಾಹಿತಿ- ಪತ್ರಕರ್ತ ಡಾ. ಶಿವರಂಜನ ಸತ್ಯಂಪೇಟೆ ಅಭಿಪ್ರಾಯಪಟ್ಟರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕಸಾಪ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪ್ರಥಮ‌ ವಚನ ಸಾಹಿತ್ಯ ಸಮ್ಮೇಳನದ ಜಗವೇ ಕೂಡಲಸಂಗಮವಾಗಿಸುವ ಪರಿ ಮೊದಲ ಗೋಷ್ಠಿಯಲ್ಲಿ ಸೌಹಾರ್ದ ಸಾರಿದ ಶರಣ ಸಂಸ್ಕೃತಿ ವಿಷಯ ಕುರಿತು ಮಾತನಾಡಿದ ಅವರು, ಇವನಾರವ ಎಂಬುದು ಜಾತಿ, ಇವ ನಮ್ಮವ ಎಂಬುದು ಧರ್ಮ. ನಮ್ಮೆಲ್ಲರ ಧರ್ಮ ಸಕಲ ಜೀವಾತ್ಮರಿಗೆ ಲೇಸು ಬಯಸುವಂತಿರಬೇಕು ಎಂದು ಅವರು ತಿಳಿಸಿದರು.

ವಚನ ಸಾಹಿತ್ಯ ಮತ್ತು ಜಾತಿ ವಿನಾಶ ಕುರಿತು ಅಫಜಲಪುರ ಭಾರತೀಯ ಬಸವ ಬಳಗ ಸಂಚಾಲಕ ಅಮೃತ ಪಾಟೀಲ ಮಾತನಾಡಿ, ಶರಣರಿಗೆ ಸಮಾಜದಲ್ಲಿನ ಮೂಢನಂಬಿಕೆ, ಜಾತಿ ವ್ಯವಸ್ಥೆ ಹೊಡೆದು ಹಾಕಿ ಸಮ ಸಮಾಜ ನಿರ್ಮಾಣದ ಕನಸು ಕಂಡಿದ್ದರು ಎಂದು ತಿಳಿಸಿದರು.

ಶರಣರ ದೃಷ್ಟಿಯಲ್ಲಿ ಭಕ್ತನೊಂದು ಕುಲ, ಭವಿಯೊಂದು ಕುಲ ಎಂದು ಹೇಳುವ ಮೂಲಕ ಜಾತಿ ವಿನಾಶಕ್ಕೆ ಮುನ್ನುಡಿ ಬರೆದರು ಎಂದು ಹೇಳಿದರು.

ಡಾ. ಶಿವಶರಣಪ್ಪ ಮೋತಕಪಳ್ಳಿ ಅಧ್ಯಕ್ಷತೆ ವಹಿಸಿದ್ದರು. ಡಾ. ಡಿ.ಎನ್. ಪಾಟೀಲ ದಿಕ್ಸೂಚಿ ನುಡಿಗಳನ್ನಾಡಿದರು.‌ ಅನುಪಮಾ ಸುಲೇಕರ್ ವೇದಿಕೆಯಲ್ಲಿದ್ದರು. ರವೀಂದ್ರಕುಮಾರ ಭಂಟನಳ್ಳಿ ನಿರೂಪಿಸಿದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

59 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420