ಕಲಬುರಗಿ; ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಅಮೃತರಾವ್ ಪಾಟೀಲ್ ಕೋಡ್ಲಹಂಗರಗಾ ಅವರ ಪುತ್ರ ಮಹದೇವಪ್ಪ (46) ಪಾಟೀಲ್ ಅವರು ಶುಕ್ರವಾರ ಕಲಬುರಗಿಯಲ್ಲಿರುವ ವಿಜಯ ನಗರ ಬಡಾವಣೆಯ ನಿವಾಸದಲ್ಲಿ ನಿಧನರಾಗಿದ್ದಾರೆ.
ಮೃತ ಮಹದೇವಪ್ಪ ಪಾಟೀಲರು ಪತ್ನಿ, ಇಬ್ಬರು ಪುತ್ರಿಯರು, ತಂದೆ- ತಾಯಿ ಹಾಗೂ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೃತರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಜ. 20 ರಂದು ಶನಿವಾರ ಆಳಂದ ತಾಲೂಕಿನ ಕೋಡ್ಲ ಹಂಗರ್ಗಾ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ನೆರವೇರಲಿದೆ ಎಂದು ಪಾಟೀಲರ ಪರಿವಾರದ ಮೂಲಗಳು ತಿಳಿಸಿವೆ.
ಮೃತ ಮಹಾದೇವಪ್ಪಗೌಡರು ಉತ್ಸಾಹಿ ಯುವಕರಾಗಿದ್ದು ಕಾಂಗ್ರೆಸ್ ಪಕ್ಷದ ಸಂಘನೆಯಲ್ಲಿ ತುಂಬ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿದ್ದರು. ಸದಾಕಾಲ ಯುವಕರೊಂದಿಗೆ ಓಡಾಡಿಕೊಂಡಿದ್ದು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಅಕಾಲಿಕ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕಲಬುರಗಿ ದಕ್ಷಿಣ ಶಾಸಕರಾದ ಅಲ್ಲಂಪ್ರಭು ಪಾಟೀಲ್ ಕಂಬನಿ ಮಿಡಿದ್ದಾರೆ.
ಶಾಸಕರಾದ ಅಲ್ಲಂಪ್ರಭು ಪಾಟೀಲರು ಇಲ್ಲಿನ ವಿಜಯ ನಗರ ಕಾಲೋನಿಯಲ್ಲಿರುವ ಮಾಜಿ ಮಹಾಪೌರ ಅಮೃತರಾವ ಪಾಟೀಲರ ನಿವಾಸಕ್ಕೆ ಭೇಟಿ ನೀಡಿ, ಮೃತರಾದ ಮಹಾದೇವಪ್ಪ ಪಾಟೀಲರ ಪಾರ್ಥೀವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. ಭಗವಂತ ಅಮೃತರಾವ ಪಾಟೀಲರ ಪರಿವಾರಕ್ಕೆ ಪುತ್ರ ವಿಯೋಗದ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿದರು.
ಯುವ ಕಾಂಗ್ರೆಸ್ ಮುಖಂಡ ಮಹಾದೇವಪ್ಪ ಪಾಟೀಲರ ನಿಧನಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗರಾಜ ಕಣ್ಣಿ, ಲಿಂಗರಾಜ ತಾಫೈಲ್, ಮುಖಂಡರಾದ ನೀಲಕಂಠರಾವ ಮೂಲಗೆ, ಸಂತೋಷ ಪಾಟೀಲ್ ದಣ್ಣೂರ, ಅರುಣ ಪಾಟೀಲ್ ಕೊಡ್ಲಹಂರಗಾ, ಭೀಮರಾವ ಮೇಳಕುಂದಿ, ಮಹಾಂತೇಶ ಪಾಟೀಲ್, ಗೌಡಪ್ಪಗೌಡ ಪಾಟೀಲ್, ಶಾಸಕರ ಆಪ್ತ ಸಹಾಯಕ ವಿಜಯಕುಮಾರ್ ಯಳಸಂಗಿ,
ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಸಕಲ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…
ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…
ಕಲಬುರಗಿ: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಮುಂಜಾನೆ. 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷ ಮತ್ತು…
ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…
ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…
ಚಿತ್ತಾಪುರ: ವಿಶ್ವ ರತ್ನ ನಡೆದಾಡುವ ಭಗವಂತ ಬಂಜಾರ ಸಮಾಜದ ಧರ್ಮಗುರುಗಳಾದ ಡಾ,ರಾಮ್ ರಾವ್ ಮಹಾರಾಜರು ಒಬ್ಬ ಮಹಾನ್ ಸರಳ ಸಜ್ಜನಿಕೆಯ…