ಬಿಸಿ ಬಿಸಿ ಸುದ್ದಿ

ಬಸವಣ್ಣ ಸಂಸ್ಕೃತಿಕ ರಾಯಭಾರಿ ಘೋಷಣೆಗೆ ಶಾಸಕ ಡಾ. ಅಜಯ್ ಸಿಂಗ್ ಹರ್ಷ

ಕಲಬುರಗಿ: ಸಚಿವ ಸಂಪುಟ ಸಭೆಯಲ್ಲಿ12 ನೇ ಶತಮಾನದ ಸಮಾನತೆಯ ಹರಿಕಾರ ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಲು ನಿರ್ಧರಿಸಿರುವ ಸರ್ಕಾರದ ಕ್ರಮವಕ್ಕೆ ಕೆಕೆ ಆರ್ ಡಿ ಬಿ ಅಧ್ಯಕ್ಷರಾದ ಡಾ ಅಜಯ್ ಸಿಂಗ್ ಅವರು ಸ್ವಾಗತಿಸಿ ಹರ್ಷ ವ್ಯಕ್ತ ಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂವಿಧಾನದಲ್ಲಿ ಎತ್ತಿ ಹಿಡಿದಿರುವ ಜಾತಿ, ವರ್ಗ, ಹಾಗೂ ಲಿಂಗ ತಾರತಮ್ಯವಿಲ್ಲದ ಸಮಾಜವನ್ನು ರೂಪಿಸುವ ಕೆಲಸ ಬಸವಣ್ಣನವರ ನೇತೃತ್ವದಲ್ಲಿ ನಡೆದಿದೆ.

“ಬಸವಣ್ಣನವರ ಸಾರ್ವಕಾಲಿಕವಾದ ಕಲ್ಯಾಣ ಸಮಾಜವನ್ನು ಕಟ್ಟುವ ಆದರ್ಶ ನೀತಿಯನ್ನು ಬೋಧಿಸಿರುವುದರಿಂದ ದೇಶದ ಸಂವಿಧಾನದ ಆಶಯಗಳಿಗೆ ಅನುಗುಣವಾಗಿರುವ ಅವರ ಚಿಂತನೆಗಳು ಬಸವಣ್ಣನವರ ಸಾಂಸ್ಕೃತಿಕ ನಾಯಕತ್ವಕ್ಕೆ ಬಲ ತುಂಬಿವೆ. ಇವೆಲ್ಲ ಹಿನ್ನೆಲೆಯಲ್ಲಿ
ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸುತ್ತಿರುವುದು ಅತ್ಯಂತ ಸ್ವಾಗತದ ಕ್ರಮವಾಗಿದೆ ಎಂದು ಅಜಯ್ ಸಿಂಗ್ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸಚಿವ ಸಂಪುಟದ ಈ ನಿರ್ಧಾರವನ್ನು ಮುಕ್ತಕಂಠದಿಂದ ಶ್ಲಾಘಿಸುವೆ.” ಬಸವಣ್ಣನವರ ಕಾಯಕ, ದಾಸೋಹ, ಸಮಾನತೆ, ಮಹಿಳಾ ಶಿಕ್ಷಣದಂತ ಮಹತ್ತರ ತತ್ವಗಳು ನಮಗೆ ಸದಾ ಕಾಲ ಪ್ರೇರಣೆ ನೀಡಲಿ ಎಂದು ಅವರು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವೈಯಕ್ತಿಕರಾಗಿ ಬಸವ  ಪ್ರಭಾವಿತರಾಗಿರೋದರಿಂಡಲೇ ಈ ಕೆಲಸ ಆಗಿದೆ.
ಸಂಪುಟದ ನಿರ್ಧಾರದ ಹಿಂದೆ ಅವರು ನಂಬಿರುವ ತತ್ವಗಳೂ ಕಾರಣವಾಗಿವೆ. ಎಂದು ಡಾ ಅಜಯ್ ಸಿಂಗ್ ಹೇಳಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

17 seconds ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

6 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago