ವಾಡಿ: ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಶನಿವಾರ ಬೆಳಿಗ್ಗೆ 10-30ಕ್ಕೆ “ಅವ್ವಂದಿರವರಿಗೆ ಅಕ್ಷರ ಹೊತ್ತೊಯ್ದವರು” ಮಹಾತ್ಮ ಜ್ಯೋತಿಬಾಪುಲೆ ಮಾತೆ ಸಾವಿತ್ರಿಬಾಯಿ ಫುಲೆ ಫಾತಿಮಾ ಶೇಖ ಜೀವನ ಸಂಘರ್ಷ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಸಂಚಲನ ವೇದಿಕೆಯ ಶ್ರಾವಣಕುಮಾರ ಮೋಸಲಗಿ ತಿಳಿಸಿದರು.
ಕವಿಗಳಾದ ದೇವೇಂದ್ರ ಕರದಳ್ಳಿ ಮಹಾತ್ಮ ಜ್ಯೋತಿಬಾ ಫುಲೆ ಕುರಿತು, ಬಂಡಾಯ ಬರಹಗಾರ ಕಾಶಿನಾಥ ಹಿಂದಿನಕೇರಿ ಫಾತೀಮಾ ಶೇಖ್ ಕುರಿತು ಹಾಗೂ ಪತ್ರಕರ್ತ ವಿಕ್ರಮ್ ನಿಂಬರ್ಗಾ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಕುರಿತು ಉಪನ್ಯಾಸ ನೀಡುವರು.
ಸ್ಥಳೀಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯರಾದ ಕರುಣಾ ಗೋಡಬೋಲೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ವೇದಿಕೆ ಪ್ರಧಾನ ಕಾರ್ಯದರ್ಶಿ, ದಯಾನಂದ ಖಜೂರಿ ಅಧ್ಯಕ್ಷತೆ ವಹಿಸುವರು. ಜನಕಲಾ ಸಮಿತಿ ಕಲಾ ತಂಡದಿಂದ ಸಂವಿಧಾನ ಪೀಠಿಕೆ ಮತ್ತು ಅರಿವಿನ ಹಾಡುಗಳ ಗಾಯನ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಯುವ ಸಾಹಿತಿಗಳು ಬರಹಗಾರರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಸಂಚಲನ ವೇದಿಕೆಯ ಶ್ರಾವಣಕುಮಾರ ಮೋಸಲಗಿ ಪ್ರಕಟಣೆಯಲ್ಲಿ ತಿಳಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…