ಬಿಸಿ ಬಿಸಿ ಸುದ್ದಿ

ವಿವಿಧ ಮನೆ ಕಳ್ಳತನ ಪ್ರಕರಣಗಳ ಆರೋಪಿ ಬಂಧನ: 4.31ಲಕ್ಷ ಮೌಲ್ಯದ ನಗ, ನಾಣ್ಯ ಜಪ್ತಿ

ಕಲಬುರಗಿ: ಯಡ್ರಾಮಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ವಿವಿಧ ಮನೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯನ್ನು ಪೋಲಿಸರು ಬಂಧಿಸಿ ಆತನಿಂದ ಸುಮಾರು 4.31.500 ರೂ.ಗಳ ಮೌಲ್ಯದ ನಗ, ನಾಣ್ಯ ಜಪ್ತಿ ಮಾಡಿದ್ದಾರೆ.

ಬಂಧಿತನಿಗೆ ಯಡ್ರಾಮಿ ತಾಂಡಾದ ನಿವಾಸಿ ಸುನೀಲ್ ತಂದೆ ಪರಶುರಾಮ್ ಪವಾರ್ (24) ಎಂದು ಗುರುತಿಸಲಾಗಿದೆ. ಬಂಧಿತನು ಯಡ್ರಾಮಿ ಠಾಣೆಯ ಐದು ಪ್ರಕರಣಗಳಲ್ಲಿ ಭಾಗಿಯಾಗಿರುವುದನ್ನು ತನಿಖೆಯ ವೇಳೆ ಒಪ್ಪಿದ್ದಾನೆ. ಬಂಧಿತನಿಂದ ಸುಮಾರು 4.25 ಲಕ್ಷ ರೂ.ಗಳ ಮೌಲ್ಯದ 85 ಗ್ರಾಮ್ ತೂಕದ ಚಿನ್ನಾಭರಣಗಳು ಹಾಗೂ 6,500ರೂ.ಗಳ ನಗದು ಸೇರಿ ಒಟ್ಟು 4,31,500ರೂ.ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಯಡ್ರಾಮಿಯ ಮುರಗರಾಜೇಂದ್ರ ಅಲಿಯಾಸ್ ಪ್ರಭು ತಂದೆ ಲಿಂಗಣ್ಣಗೌಡ ಪೋಲಿಸ್ ಪಾಟೀಲ್ ಅವರು ಕಳೆದ 12ರಂದು ಠಾಣೆಗೆ ದೂರು ಸಲ್ಲಿಸಿ, ತಮ್ಮ ಮನೆಯ ಬೀಗ ಹಾಕಿಕೊಂಡು ಹೋದ ಸಂದರ್ಭದಲ್ಲಿ ಅಲಮಾರಿಯಲ್ಲಿ ಇಟ್ಟಿದ್ದ ನಗದು 52000ರೂ.ಗಳು, 25000ರೂ.ಗಳ ಮೌಲ್ಯದ ಅರ್ಧ ತೊಲೆ ಚಿನ್ನದ ಉಂಗುರ, 48,000ರೂ.ಗಳ ಮೌಲ್ಯದ ಒಂದು ತೊಲೆ ಬಂಗಾರದ ನೆಕ್ಲೇಸ್ ಕಳ್ಳತನವಾಗಿದ ಕುರಿತು ತಿಳಿಸಿದ್ದರು. ಅದೇ ರೀತಿ ಯಡ್ರಾಮಿ ಪಟ್ಟಣದಲ್ಲಿಯೂ ಸಹ ವಿವಿಧ ಮನೆಗಳ ಕಳ್ಳತನ ಪ್ರಕರಣಗಳು ಸಹ ವರದಿಯಾಗಿದ್ದವು.

ಪಿಎಸ್‍ಐಗಳಾದ ಸುಖಾನಂದ್ ಸಿಂಗೆ, ರಾಜಶೇಖರ್ ಗಡ್ಡದ್ ಅವರ ನೇತೃತ್ವದಲ್ಲಿ ಎಎಸ್‍ಐಗಳಾದ ಚಂದ್ರಕಾಂತ್, ಸುರೇಶಕುಮಾರ್, ಸಿಬ್ಬಂದಿಗಳಾದ ದೊಡ್ಡಬಸಪ್ಪ, ಉಮೇಶ್, ಶಂಕ್ರಣ್ಣ, ಮೌಲಪ್ಪ, ಬಸಲಿಂಗ್, ಸಿದ್ದಣ್ಣ, ಚಂದ್ರಾಮ್ ಹಾಗೂ ಪಿಎಸ್‍ಐ ಶ್ರೀಮತಿ ಪದ್ಮಾ ಹಾಗೂ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಕಾರ್ಯಾಚರಣೆಯನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವರು ಶ್ಲಾಘಿಸಿದ್ದಾರೆ.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

25 seconds ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

8 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago