“ದೇಶದ ಜ್ವಲಂತ ಸಮಸ್ಯೆಗಳಿಗೆ ಸಮಾಜವಾದಿ ಕ್ರಾಂತಿಯಿಂದ ಮಾತ್ರ ಪರಿಹಾರ ಸಾಧ್ಯ”

ಶಹಾಬಾದ; ದೇಶವನ್ನು ಕಿತ್ತು ತಿನ್ನುತ್ತಿರುವ ಬಡತನ , ನಿರುದ್ಯೋಗ, ಕೋಮುವಾದ, ಜಾತಿವಾದ, ಬೆಲೆಏರಿಕೆ, ಮಹಿಳೆಯರ ಮೇಲಿನ ಅತ್ಯಚಾರಗಳಂತ ಜ್ವಲಂತ ಸಮಸ್ಯೆಗಳನ್ನು ಪಕ್ಷ ಅಥವಾ ಸರಕಾರಗಳನ್ನು ಬದಲಾಯಿಸಿದರೆ ಪರಿಹಾರವಾಗುವುದಿಲ್ಲ. ಬದಲಾಗಿ ಕ್ರಾಂತಿಕಾರಿ ಸಿದ್ದಾಂತದ ಆಧಾರದ ಮೇಲೆ ಸಮಾಜವಾದಿ ಕ್ರಾಂತಿಯಿಂದ ಮಾತ್ರವೇ ಸಾಧ್ಯವೆಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಷ್ಟ್) ಪಕ್ಷದ ಸ್ಥಳೀಯ ಸಮಿತಿಯ ಕಾರ್ಯದರ್ಶಿಗಳಾದ ಕಾಮ್ರೇಡ್ ಗಣಪತರಾವ ಕೆ ಮಾನೆ ಅವರು ಹೇಳಿದರು.

ಅವರು ಶಹಾಬಾದನ ಹನುಮಾನ ನಗರದಲ್ಲಿ ಎಸ್.ಯು.ಸಿ.ಐ (ಸಿ) ಪಕ್ಷದ ಕಾರ್ಯಾಲಯದಲ್ಲಿ ರಷ್ಯಾ ಕ್ರಾಂತಿಯ ಶಿಲ್ಪಿ ಹಾಗೂ ಕಾರ್ಮಿಕ ವರ್ಗದ ಮಹಾನ್ ನೇತಾರರಾದ ವಿ.ಐ,ಲೆನಿನ್ ಅವರ ಮರಣ ಶತಾಬ್ದಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇಡೀ ಯುರೋಪ್ ಖಂಡದಲ್ಲಿಯೇ ರೋಗಗ್ರಸ್ಥವಾದ ರಷ್ಯಾ ದೇಶದಲ್ಲಿ ನೈಜ ಕಮ್ಯೂನಿಷ್ಟ್ ಪಕ್ಷವನ್ನು ಸ್ಥಾಪಿಸಿ, ಜಾರ್ ರಾಜನ ದಬ್ಬಾಳಿಕೆಯನ್ನು ಮೆಟ್ಟಿನಿಂತು, ರೈತ-ಕಾರ್ಮಿಕರನ್ನು ಸಂಘಟಿಸಿ 1917ರಲ್ಲಿ ಸಮಾಜವಾದಿ ಕ್ರಾಂತಿಯನ್ನು ನೇರವೇರಿಸಿದ ಕೀರ್ತಿಯು ಲೆನಿನ್ ಅವರಿಗೆ ಸಲ್ಲುತ್ತದೆ. ಪ್ರಥಮ ಮಹಾಯುದ್ಧದ ಸಂದರ್ಭದಲ್ಲಿ ಈ ಕ್ರಾಂತಿಯು ವಿಶ್ವದ ಕಾರ್ಮಿಕ ವರ್ಗದಲ್ಲಿ ಹೊಸ ಆಶಾಭಾವನೆಯನ್ನು ಹುಟ್ಟಿಸಿತು. ಕ್ರಾಂತಿಯಾದ ಕೆಲವೇ ವರ್ಷಗಳಲ್ಲಿ ರಷ್ಯಾದ ಸಮಾಜವಾದಿ ಆರ್ಥಿಕತೆಯು ಅಮೆರಿಕಾಕಿಂತಲು ಬಲಿಷ್ಠ ರಾಷ್ಟ್ರವಾಗಿ ಬೆಳೆಯಿತು. ಬಡತನ , ನಿರುದ್ಯೋಗ, ಕೋಮುವಾದ, ಬೆಲೆಏರಿಕೆ, ವೈಶ್ಯವಾಟಿಕೆಗಳಂತಹ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಿದರು. ಎಲ್ಲರಿಗೂ ಉಚಿತ ಶಿಕ್ಷಣ ಮತ್ತು ಆರೋಗ್ಯವನ್ನು ಖಚಿತ ಪಡಿಸಿದರು ಎಂದು ಹೇಳುತ್ತ, 1991ರಲ್ಲಿ ಅಲ್ಲಿನ ನಾಯಕರ ಪರಿಷ್ಕರಣವಾದದಿಂದ್ದಾಗಿ ಸಮಾಜವಾದಿ ವ್ಯವಸ್ಥೆಯು ಪತನ ಹೊಂದಿತ್ತು. ಇದು ಸಮಾಜವಾದಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದ್ದು ಮತ್ತೆ ರಷ್ಯದಲ್ಲಿ ಸಮಾಜವಾದಿ ವ್ಯವಸ್ಥಯನ್ನು ಮರುಸ್ಥಾಪಿಸಲು ಹೋರಾಟಗಳನ್ನು ನಡೆಯುತ್ತಿರುವುದು ಆಶಾದಾಯಕವಾಗಿದೆ. ಎಂದು ನುಡಿದರು.

ನಮ್ಮ ದೇಶವನ್ನು ಕಾಡುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರವೆಂದರೆ ಅದು ಸಮಾಜವಾದಿ ಕ್ರಾಂತಿಯಿಂದಲೇ ಮಾತ್ರ ಸಾಧ್ಯವೆಂದು ಹೇಳುತ್ತಾ, ಆ ಕ್ರಾಂತಿಯನ್ನು ವಿದ್ಯಾರ್ಥಿ-ಯುವಜನರು-ಮಹಿಳೆಯರು-ರೈತರು ಹಾಗೂ ಕಾರ್ಮಿಕರು ಸಂಘಟಿತರಾಗಿ ಹೋರಾಟ ಮಾಡಿದ್ದಾಗ ಮಾತ್ರವೇ ಈ ಭ್ರಷ್ಟವ್ಯವಸ್ಥೆಯನ್ನು ಕಿತ್ತೊಗಿದು ಶೋಷಣೆರಹಿತ ಸಮಾಜವಾದಿ ಸಮಾಜವನ್ನು ಕಟ್ಟಬಹುದೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಯು.ಸಿ.ಐ (ಸಿ) ನಾಯಕರಾದ ರಾಮಣ್ಣ.ಎಸ್.ಇಬ್ರಾಹಿಂಪೂರ, ರಾಘವೇಂದ್ರ ಎಮ್.ಜಿ. ರಾಜೇಂದ್ರ ಆತ್ನೂರ, ಸಿದ್ದು ಚೌದರಿ. ಗುಂಡಮ್ಮ ಮಡಿವಾಳ. ಭಾಗಣ್ಣ ಬುಕ್ಕ, ತುಳಜರಾಮ ಎನ್ ಕೆ, ರಮೇಶ ದೇವಕರ. ನೀಲಕಂಠ ಎಮ್ ಹುಲಿ. ರಾಧಿಕಾ ಚೌದರಿ. ಸುಕನ್ಯಾ. ಆನಂದ ಸೇರಿ ಹಲವಾರು ರೈತರು, ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ಭಾಗವಹಿಸಿದ್ದರು. ಜಗನ್ನಾಥ.ಎಸ್.ಎಚ್ ಅವರು ನಿರೂಪಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420