ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಾಂತಲಿಂಗ ಪಾಟೀಲ್ ಕೋಳಕೂರ್ ನೇಮಕ

0
25

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಕೋಳಕೂರ ವಲಯ ಘಟಕದ ಅಧ್ಯಕ್ಷರೂ ಆಗಿರುವ ಯುವ ಉತ್ಸಾಹಿ ಸಂಘಟಕ ಶಾಂತಲಿಂಗ ಪಾಟೀಲ್ ಕೋಳಕೂರ್ ಅವರನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ವಡ್ಡನಕೇರಿ ತಮ್ಮ ನೇಮಕ ಆದೇಶದಲ್ಲಿ ತಿಳಿಸಿದ್ದಾರೆ.

ಈ ಗುರುತರ ಜವಾಬ್ದಾರಿಯನ್ನು ವಹಿಸಿಕೊಂಡು ಜಿಲ್ಲೆಯಾದ್ಯಂತ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತನ್ನು ಸಂಘಟಿಸುವಂತೆ ಡಾ ಮಲ್ಲಿಕಾರ್ಜುನ ವಡನಕೇರಿಯವರು ಆದೇಶದಲ್ಲಿ ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here