ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳು ಜ್ಞಾನದಾಹಿಗಳಾಗಬೇಕು: ಪ್ರೊ. ಕನಹಳ್ಳಿ

ಕಲಬುರಗಿ: ವಿದ್ಯಾರ್ಥಿಗಳು ಜ್ಞಾನ ದಾಹಿಗಳಾಗಬೇಕು. ಹಾಗೆ ಆಗುವಲ್ಲಿ ಬುದ್ಧ, ಬಸವ ಅಂಬೇಡ್ಕರ್ ಹಾಗೂ ಗಾಂಧೀಜಿಯವರ ತತ್ವಗಗಳನ್ನು ಬುದುಕಿನ ಭಾಗವಾಗಿಸಿಕೊಳ್ಳಬೇಕೆಂದು ಪ್ರೊ. ಬಿ.ಎಂ. ಕನಹಳ್ಳಿಯವರು ಅಭಿಪ್ರಾಯಪಟ್ಟರು. ದಿನಾಂಕ ೦೬.೦೯.೨೦೧೯ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಹಮ್ಮಿಕೊಂಡ ಶಿಕ್ಷಕ ದಿನಾಚರಣೆಯಲ್ಲಿ ಭಾಗವಹಿಸಿ ಮಾತಾಡುತ್ತಾ, ಮುಂದುವರೆದು ಯಾವುದಾದರು ದೇಶ ಬೆಳೆದಿದೆ ಎಂದರೆ ಅಲ್ಲಿಯ ಶಿಕ್ಷಣ ಉತ್ತಮವಾಗಿದೆ ಎಂದರ್ಥ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಎಸ್.ಜಿ. ಡೊಳ್ಳೆಗೌಡರು ವಿದ್ಯಾರ್ಥಿಗಳು ಸತತ ಅಧ್ಯಯನ ಸಂಶೋಧನೆ ಮೂಲಕ ಬದುಕನ್ನು ರೂಪಿಸಿಕೊಳ್ಳಬೇಕು. ಆ ಮೂಲಕ ದೇಶದ ಬೆಳವಣಿಗೆಗೆ ಶ್ರಮಿಸಬೇಕೆಂದು ಅಭಿಪ್ರಾಯಪಟ್ಟರು. ಓದು ಬರೆಹ ಬರುವುದು ಅಧ್ಯಯನದಿಂದ, ಅಧ್ಯಯನ ಅನ್ನುವುದು ತಪ್ಪಸ್ಸು ಯಾರು ಮಾಡುತ್ತಾರೊ ಅವರು ಅಂಬೇಡ್ಕರ್ ಅವರಂತೆ, ಸರ್ವಪಲ್ಲಿ ರಾಧಾಕೃಷ್ಣರಂತೆ, ಗಾಂಧೀಜಿಯಂತೆ ಹೆಸರುಗಳಿಸಲು ಸಾಧ್ಯವಿದೆ ಎಂದು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎಚ್.ಟಿ. ಪೋತೆ ಅಭಿಪ್ರಾಯಪಟ್ಟರು. ಮುಂದುವರೆದು ಮಾತನಾಡುತ್ತ ಹೈದ್ರಾಬಾದ ಕರ್ನಾಟಕ ಪ್ರದೇಶವು ಶರಣರು, ದಾಸರು, ತತ್ವಪದಕಾರರ ನೆಲೆ ಬೀಡಾಗಿದೆ. ಹೀಗಾಗಿ ವಿಜ್ಞಾನದ ವಿದ್ಯಾರ್ಥಿಗಳು ಇವುಗಳನ್ನು ಮನನ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಪ್ರೊ. ಜಿ.ಎಂ. ವಿದ್ಯಾಸಾಗರ ಅವರು ಜಗತ್ತಿನಲ್ಲಿ ಮೊಟ್ಟ ಮೊದಲು ವಿಶ್ವವಿದ್ಯಾಲಯ ಸ್ಥಾಪಿಸಿದವರು. ಆದರೆ ಭಾರತೀಯರು ಸಾಮಾಜಿಕ ನೆಲೆಯಲ್ಲಿ ಜಾತಿ ಕಾರಣಕ್ಕೆ ಕಲಹದಲ್ಲಿ ತೊಡಗಿದ್ದೇವೆ, ಇದರಿಂದ ಹೊರಬಂದಾಗ ಮಾತ್ರ ಸಮಾಜ ಮುಂದೆ ಬರಲು ಸಾಧ್ಯವಿದೆ ಎಂದು ಹೇಳಿದರು.

ಸಭೆಯಲ್ಲಿ ಅತಿಥಿ ಉಪನ್ಯಾಸಕರು, ಸಂಶೋಧನ, ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಂಜಲಿ ಜಿ.ಡಿ. ಸ್ವಾಗತಿಸಿ ನಿರ್ವವಹಿಸಿದರು, ನಿಕತ್ ಆಫ್ರಿನ್ ವಂದಿಸಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

34 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

1 hour ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

1 hour ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago