ಅಂಬೇಡ್ಕರ್ ಪುತ್ಥಳಿಗೆ ಅವಮಾನಕ್ಕೆ ಡಾ. ಶರಣು ಹೊನ್ನಗೆಜ್ಜೆ ಖಂಡನೆ

0
11

ಕಲಬುರಗಿ; ನಗರಕ್ಕೆ ಹೊಂದಿಕೊಂಡಿರುವ ಕೋಟನೂರ್ (ಡಿ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆಯನ್ನು ಅನನ್ಯ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶರಣು ಹೊನ್ನಗೆಜ್ಜೆ ತೀವ್ರವಾಗಿ ಖಂಡಿಸಿದ್ದಾರೆ.

ಡಾ. ಅಂಬೇಡ್ಕರ್ ಅವರು ಇಡೀ ದೇಶಕ್ಕೆ ಅತ್ಯುನ್ನತ ಸಂವಿಧಾನ ನೀಡಿದವರು. ಮಾನವೀಯತೆ, ಸಾಮಾಜಿಕ ಸಮಾನತೆಯ ಹರಿಕಾರ. ಭಾರತ ರತ್ನ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿರುವುದು ಅಕ್ಷಮ್ಯ. ಇದನ್ನು ಎಲ್ಲರೂ ಉಗ್ರವಾಗಿ ಖಂಡಿಸಬೇಕು. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಎಂದು ಡಾ. ಶರಣು ಹೊನ್ನಗೆಜ್ಜೆ ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here