ಅಂಬೇಡ್ಕರ್ ಪುತ್ಥಳಿ ಅವಮಾನಿಸಿದವರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಲು ಒತ್ತಾಯ

0
47

ಕಲಬುರಗಿ: ನಗರದ ಹೊರವಲಯದ ಕೋಟನೂರು(ಡಿ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಪ್ರಕರಣದ ಆರೋಪಿಗಳಿಗೆ ಕಠಿಣ ಕಾನೂನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್‍ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪ ಎಸ್. ಜಮಾದಾರ್ ಅವರು ಒತ್ತಾಯಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರು ಮಹಾನ್ ಪುರುಷರಾಗಿದ್ದು, ದೇಶಕ್ಕೆ ಸಂವಿಧಾನವನ್ನು ಕೊಟ್ಟಿದ್ದಾರೆ. ಅಂತಹ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ್ದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಸಂಗತಿ ಎಂದು ಆಕ್ರೋಶ ಹೊರಹಾಕಿದರು.

Contact Your\'s Advertisement; 9902492681

ಇಂತಹ ಘಟನೆಗಳು ಮರುಕಳಿಸದಂತೆ ಪೋಲಿಸ್ ಇಲಾಖೆಯವರು ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಯಾರೂ ಸಹ ಕಾನೂನು ಕೈಗೆತ್ತಿಕೊಳ್ಳದೇ ಶಾಂತಿಯುತ ಹೋರಾಟವನ್ನು ಮಾಡಬೇಕು ಎಂದು ಕರೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here